Connect with us

Dvgsuddi Kannada | online news portal | Kannada news online

ದಾವಣಗೆರೆ: ಅನಾರೋಗ್ಯದಿಂದ ಸಾವನ್ನಪ್ಪಿದ ಶ್ವಾನ ದಳದ ಸೌಮ್ಯಗೆ ಸಕಲ ಸರ್ಕಾರಿ ಗೌರವದೊಂದಿಗೆ ನಮನ

IMG 20230902 215216

ದಾವಣಗೆರೆ

ದಾವಣಗೆರೆ: ಅನಾರೋಗ್ಯದಿಂದ ಸಾವನ್ನಪ್ಪಿದ ಶ್ವಾನ ದಳದ ಸೌಮ್ಯಗೆ ಸಕಲ ಸರ್ಕಾರಿ ಗೌರವದೊಂದಿಗೆ ನಮನ

ದಾವಣಗೆರೆ; ಜಿಲ್ಲಾ ಪೊಲೀಸ್ ನ ಶ್ವಾನ ದಳದ ಸ್ಫೋಟಕ ಪತ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯ ಇಂದು ಅನಾರೋಗ್ಯ ಕಾರಣ ನಿಧನ ಹೊಂದಿದೆ. ನಗರದ ಡಿಎಆರ್ ಆವರಣದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಸರ್ಕಾರಿ ಗೌರವಗಳೊಂದಿಗೆ ಸೌಮ್ಯಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ಗೌರವ ವಂದನೆ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಆವರಣದಲ್ಲಿ ಶ್ವಾನದ ಮೃತದೇಹ ಇಟ್ಟು ಗಾಳಿಯಲ್ಲಿ ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಇತ್ತೀಚೆಗೆ ಶ್ವಾನ ದಳದ ತುಂಗಾ ಸಾವಿನ ನಂತರ ಮತ್ತೊಂದು ಶ್ವಾನ ಸಾವನ್ನಪ್ಪಿದೆ. ಕೊಲೆ, ದರೋಡೆ ಪ್ರಕರಣಗಳ ಬೇಧಿಸಿದ್ದ ತುಂಗಾ ಅಕಾಲಿಕ ಸಾವಿಗೀಡಾಗಿತ್ತು. ಈಗ ಸೌಮ್ಯ ಕೂಡ ಸಾವನ್ನಪ್ಪಿದ್ದು, ಜಿಲ್ಲಾ ಪೊಲೀಸ್ ಶ್ವಾನ ದಳದ ಮತ್ತೊಂದು ಶ್ವಾನ ಕಳೆದುಕೊಂಡಂತಾಗಿದೆ.

ಪೊಲೀಸ್ ಇಲಾಖೆಗೆ ಹಲವು ಪ್ರಕರಣ ಪತ್ತೆ ಮಾಡಲು ಅತ್ಯುತ್ತಮ ಸೇವೆ ಸಲ್ಲಿಸಿದ ಸೌಮ್ಯ ಕಳೆದುಕೊಂಡಿದ್ದು, ಇಲಾಖೆಗೆ ತುಂಬಲಾರದ ನಷ್ಟ ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದರು. ಈ ಸಂದರಭದಲ್ಲಿ ವೇಳೆ ಡಿವೈಎಸ್ಪಿ, ಎಸ್ಐ, ಪೊಲೀಸ್ ಸಿಬ್ಬಂದಿ ಹಾಜರಿದ್ದರು. ಅವರೂ ಸಹ ಶ್ವಾನಕ್ಕೆ ಗೌರವ ಸಲ್ಲಿಸಿದರು.

#PoliceDog #Sowmya, #Davanagere #Police

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top