Connect with us

Dvgsuddi Kannada | online news portal | Kannada news online

ದಾವಣಗೆರೆ: ಶೇ.50ರಷ್ಟು ರಿಯಾಯಿತಿ‌ ದರದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಇಂದೇ ಕೊನೆ ದಿನ

images 2

ದಾವಣಗೆರೆ

ದಾವಣಗೆರೆ: ಶೇ.50ರಷ್ಟು ರಿಯಾಯಿತಿ‌ ದರದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಇಂದೇ ಕೊನೆ ದಿನ

ದಾವಣಗೆರೆ: ಶೇ.50ರಷ್ಟು ರಿಯಾಯಿತಿ‌ ದರದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಇಂದೇ (ಸೆ.9) ಕೊನೆ ದಿನವಾಗಿದೆ. ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳ ಮೇಲೆ ಪೊಲೀಸ್ ಇಲಾಖೆಯಿಂದ ಸಂಚಾರಿ ಇ-ಚಲನ್‌ಗಳ ಮೂಲಕ ದಾಖಲಿಸಿದ ಪ್ರಕರಣಗಳನ್ನು ಇತ್ಯಾರ್ಥಪಡಿಸುವ ಬಗ್ಗೆ ಮತ್ತೊಂದು ಬಾರಿಗೆ ಶೇಕಡಾ 50% ರಷ್ಟು ರಿಯಾಯತಿಯನ್ನು ಸರ್ಕಾರ ದಿನಾಂಕ :05-07-2023 ರಲ್ಲಿ ಘೋಷಣೆ ಮಾಡಿತ್ತು.

ದಾವಣಗೆರೆ ಜಿಲ್ಲೆಯಲ್ಲಿ ದಿನಾಂಕ :11-02-2023 ಕ್ಕಿಂತ ಪೂರ್ವದಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ ಒಟ್ಟು 1,03,429 ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳು ದಂಡ
ಪಾವತಿಯಾಗದೇ ಬಾಕಿ ಇರುತ್ತವೆ. ದಿನಾಂಕ :11-02-2023 ಕ್ಕಿಂತ ಪೂರ್ವದಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಶೇ 50% ರಿಯಾಯತಿ ಲಭ್ಯವಿದ್ದು,ರಿಯಾಯತಿಗೆ ನಿಗಧಿಪಡಿಸಿದ ದಿನಾಂಕ : 09-09-2023 ಕೊನೆಗೊಳ್ಳುವುದರಿಂದ ಸಾರ್ವಜನಿಕರು ಈ ರಿಯಾಯತಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.

ನಿಗದಿತ ಅವಧಿಯಲ್ಲಿ ತಮ್ಮ ವಾಹನಗಳ ಮೇಲೆ ದಾಖಲಾಗಿರುವ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳನ್ನು ಸರ್ಕಾರದ
ಆದೇಶದನ್ವಯ ಶೇಕಡಾ 50% ರಷ್ಟು ರಿಯಾಯ್ತಿ ದರದಲ್ಲಿ ಆನ್‌ಲೈನ್ ಸೇವಾ ಕೇಂದ್ರಗಳಾದ ದಾವಣಗೆರೆ, ಕರ್ನಾಟಕ ಹಾಗೂ ದಾವಣಗೆರೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ & ಉತ್ತರ ಸಂಚಾರ ಪೊಲೀಸ್ ಠಾಣೆಗಳಲ್ಲಿ ಪಾವತಿಸಿಕೊಳ್ಳಲು ಕೋರಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top