Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಎಸ್ ಐ ಮಂಜುನಾಥ ಎಸ್. ಕಲ್ಲೇದೇವರಿಗೆ ರಾಷ್ಟ್ರಪತಿ ಪದಕ; ಜಿಲ್ಲಾ ಪೊಲೀಸ್ ಅಭಿನಂದನೆ

ದಾವಣಗೆರೆ

ದಾವಣಗೆರೆ: ಪಿಎಸ್ ಐ ಮಂಜುನಾಥ ಎಸ್. ಕಲ್ಲೇದೇವರಿಗೆ ರಾಷ್ಟ್ರಪತಿ ಪದಕ; ಜಿಲ್ಲಾ ಪೊಲೀಸ್ ಅಭಿನಂದನೆ

ದಾವಣಗೆರೆ: 2024 ನೇ ಸಾಲಿನ ಗೌರವಾನ್ವಿತ ರಾಷ್ಟ್ರಪತಿ ಶ್ಲಾಘನೀಯ ಪೊಲೀಸ್ ಸೇವಾ ಪದಕಕ್ಕೆ ಭಾಜನರಾದ ಜಿಲ್ಲೆಯ ಬೆರಳು ಮುದ್ರೆ ಘಟಕದ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಎಸ್. ಕಲ್ಲೇದೇವರ ಅವರಿಗೆ ಎಸ್ಪಿ ಉಮಾ ಪ್ರಶಾಂತ್ ಹಾಗೂ ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ್ ಮತ್ತು ಜಿ ಮಂಜುನಾಥ ಅವರು ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದನೆ ತಿಳಿಸಿದ್ದಾರೆ.

ಪೊಲೀಸ್ ಉಪನಿರೀಕ್ಷಕ ಮಂಜುನಾಥ ಎಸ್. ಕಲ್ಲೇದೇವರ, 2002 ನೇ ಬ್ಯಾಚ್ ನ ಬೆರಳು ಮುದ್ರೆ ಘಟಕದ ಪಿ ಎಸ್ ಐ ಆಗಿ ನೇಮಕ ಹೊಂದಿದ್ದು, ಹಾವೇರಿ ಜಿಲ್ಲೆ, ಬೆಳಗಾವಿ ನಗರ, ಬೆಂಗಳೂರು ಸಿಟಿ, ನಂತರ ದಾವಣಗೆರೆ ಜಿಲ್ಲಾ ಪೊಲೀಸ್ ಕಛೇರಿಯ ಬೆರಳು ಮುದ್ರೆ ಘಟಕದಲ್ಲಿ ಪಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮಂಜುನಾಥ ಎಸ್ ಕಲ್ಲೇದೇವರ ದಾವಣಗೆರೆ ಜಿಲ್ಲೆಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಆರೋಪಿತರುಗಳ ಪತ್ತೆಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿರುತ್ತಾರೆ. ಇವರಿಗೆ 2017 ರಲ್ಲಿ ಅತ್ಯುತ್ತಮ ಸೇವೆಗೆ ನೀಡಲಾಗುವ ಕರ್ನಾಟಕ ಸರಕಾರದ ಮಾನ್ಯ ಮುಖ್ಯ ಮಂತ್ರಿ ಪದಕಕ್ಕೆ ಭಾಜನರಾಗಿದ್ದರು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top