ದಾವಣಗೆರೆ: ಹೆಚ್ಚುತ್ತಿರುವ ಹೊಸ ರೀತಿಯ ಅಪರಾಧ ಕೃತ್ಯಗಳು | ಭವಿಷ್ಯದಲ್ಲಿ ಪೊಲೀಸರ ವೃತ್ತಿ ಮತ್ತಷ್ಟು ಕಠಿಣ: ಡಾ.ರವಿಕಾಂತೇಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಹೆಚ್ಚುತ್ತಿರುವ ಹೊಸ ರೀತಿಯ ಅಪರಾಧ ಕೃತ್ಯಗಳಿಂದ ಭವಿಷ್ಯದಲ್ಲಿ ಪೊಲೀಸರ ವೃತ್ತಿ ಮತ್ತಷ್ಟು ಕಠಿಣವಾಗಲಿದೆ ಎಂದು ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ರವಿಕಾಂತೇಗೌಡ ಅಭಿಪ್ರಾಯಪಟ್ಟರು.

ಪ್ರತಿ ವರ್ಷ 27 ಸಾವಿರ ಸೈಬರ್ ಅಪರಾಧ

ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ನಡೆದ 7 ನೇ ವಲಯ ಪೊಲೀಸ್ ಕರ್ತವ್ಯಕೂಟ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಪ್ರತಿ ವರ್ಷ 27 ಸಾವಿರ ಸೈಬರ್ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ವಂಚನೆಯಾಗುತ್ತಿರುವ ಮೊತ್ತ ಹಲವು ನೂರು ಕೋಟಿಗಳಾಗಿವೆ. ಈ ರೀತಿ ಹೊಸ ಅಪರಾಧಗಳು, ಹೊಸ ಶೈಲಿಯ ಅಪರಾಧಿಗಳು ನಮ್ಮ ಮುಂದೆ ಬರುತ್ತಿದ್ದಾರೆ. ಇದರ ಮಧ್ಯೆ ಪೊಲೀಸ್ ಇಲಾಖೆಯಲ್ಲಿ ಕಟ್ಟಡಗಳು ಮತ್ತು ವಾಹನಗಳು ಉತ್ತಮಗೊಂಡಿರಬಹುದು, ಆದರೆ, ಪೊಲೀಸರಿಗೆ ಎದುರಾಗಿರುವ ಸವಾಲುಗಳ ಆಯಾಮವೇ ಬದಲಾಗಿದೆ ಎಂದರು.

ಪರಿಣಾಮಕಾರಿಯಾಗಿ ಪತ್ತೆ ಹಚ್ಚುವ ಟೂಲ್ ಉಪಯೋಗಿಸಬೇಕಿದೆ

ಸೈಬರ್ ಅಪರಾಧಿಗಳು ಕೃತ್ಯ ಎಸಗಲು ಅನೇಕ ಟೂಲ್ ಗಳನ್ನು ಉಪಯೋಗಿಸುತ್ತಿದ್ದಾರೆ. ಅವುಗಳನ್ನು ಭೇದಿಸಲು ಇಲಾಖೆ ಕೂಡ ಅನೇಕ ಟೂಲ್ ಗಳನ್ನು ಉಪಯೋಗಿಸುತ್ತಿದೆ. ಆದರೆ ಈ ರೀತಿಯ ಕೃತ್ಯಗಳು ನಡೆಯದೇ ಇರಲು ಅಥವಾ ಅವುಗಳನ್ನು ಪರಿಣಾಮಕಾರಿಯಾಗಿ ಪತ್ತೆ ಹಚ್ಚುವ ಟೂಲ್ ಗಳನ್ನು ಉಪಯೋಗಿಸುವ ಚಾಕಚಕ್ಯತೆಯನ್ನು ಗಳಿಸಿಕೊಂಡರೆ ಅಪರಾಧಿಗಳಿಗಿಂತ ನಾವು ಒಂದು ಹೆಜ್ಜೆ ಮುಂದೆ ಹೋಗಬಹುದು. ಇಲ್ಲವಾದರೆ ಅಪರಾಧಿ ಸಾವಿರ ಹೆಜ್ಜೆ ಮುಂದೆ ಇರುತ್ತಾನೆ, ನಾವು ಕುಳಿತಲ್ಲೇ ಕುಳಿತಿರುತ್ತೇವೆ ಎಂದರು.

ಸಾಕ್ಷಿಗಳು ಪೊಲೀಸರನ್ನು ಕಾಪಾಡುತ್ತವೆ

ವೈಯಕ್ತಿಕ ಸಾಕ್ಷಿಗಳು ನ್ಯಾಯಾಲಯದ ಮುಂದೆ ಬಂದು ಪ್ರಮಾಣ ವಚನ ತೆಗೆದುಕೊಂಡ ನಂತರ, ಹಿಂದೆ ಪೊಲೀಸರಿಗೆ ನೀಡಿದ ಹೇಳಿಕೆಗೆ ವಿರುದ್ಧವಾಗಿ ನುಡಿಯುತ್ತಾರೆ. ಇದಕ್ಕೆ ಒತ್ತಡ, ಆಸೆ-ಆಮಿಷ ಅಥವಾ ವೈರಾಗ್ಯ ಸೇರಿದಂತೆ ಬೇರೆ ಬೇರೆ ಕಾರಣಗಳು ಇರಬಹುದು.. ಆದರೆ ವೈಜ್ಞಾನಿಕವಾಗಿ ಸಂಗ್ರಹ ಮಾಡಿದಂತಹ ಸಾಕ್ಷಿಗಳು ಯಾವತ್ತೂ ಬದಲಾವಣೆ ಆಗುವುದಿಲ್ಲ. ಅವುಗಳೇ ಪೊಲೀಸರನ್ನು ಕಾಪಾಡುತ್ತವೆ ಎಂದರು ಹೇಳಿದರು.

ತರಬೇತಿಯ ನಂತರ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಶಿವಮೊಗ್ಗ ವಿಭಾಗದ ಸಂಚಾರಿ ವಿಭಾಗದ ಸಿಪಿಐ ದೇವರಾಜ್ ಮಾತನಾಡಿ, ಪೊಲೀಸ್ ಕರ್ತವ್ಯದಲ್ಲಿ ವೃತ್ತಿಪರತೆಯನ್ನು ಬೆಳೆಸಿಕೊಳ್ಳಲು ಮತ್ತು ಆಧುನಿಕ ತನಿಖಾ ಕೌಶಲ್ಯಗಳನ್ನು ಕಲಿಯಲು ಪೊಲೀಸ್ ಕರ್ತವ್ಯ ಕೂಟಗಳು ಅತ್ಯಂತ ಸಹಕಾರಿಯಾಗಿವೆ. ಇಂದಿನ ದಿನಗಳಲ್ಲಿ ಸಾರ್ವಜನಿಕರು ಪೊಲೀಸರ ಕಾರ್ಯವೈಖರಿ ಮತ್ತು ವೃತ್ತಿಪರತೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸುತ್ತಾರೆ ಎಂದು ಇತ್ತೀಚೆಗೆ ಮೈಸೂರು ದಸರಾ ಹಾಗೂ ಧರ್ಮಸ್ಥಳದ ಪ್ರಕರಣಗಳನ್ನು ಉದಾಹರಿಸಿದರು.

ಸಮಾರೋಪ ಸಮಾರಂಭದಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ ಪಿಎಸ್ ಐ ಅರವಿಂದ ಬಿ ಎಸ್ ರವರು ಮಾತನಾಡಿ- ನಮ್ಮ ದೈನಂದಿನ ಕರ್ತವ್ಯಗಳಲ್ಲಿ ತರಬೇತಿಯು ತುಂಬಾ ಪ್ರಮುಖವಾಗಿದೆ.. ಇಂತಹ ಸ್ಪರ್ಧೆಗಳಿಂದ ನಮ್ಮ ಕರ್ತವ್ಯದ ಸಮಯದಲ್ಲಿ ಹೆಚ್ಚಿನ ಪರಿಪಕ್ವತೆ ಕಾಣಬಹುದಾಗಿದೆ ಎಂದು ತಿಳಿಸಿದರು.

7 ನೇ ವಲಯ ಪೊಲೀಸ್ ಕರ್ತವ್ಯಕೂಟದಲ್ಲಿ ಎರಡು ದಿನಗಳ ಕೂಟದಲ್ಲಿ 23 ಪ್ರಶಸ್ತಿಗಳನ್ನು ಪಡೆದುಕೊಂಡ ದಾವಣಗೆರೆ ಪೊಲೀಸ್ ತಂಡ ಸರ್ವೋತ್ತಮ ಪ್ರಶಸ್ತಿಗೆ ಭಾಜನವಾಯಿತು. ದಾವಣಗೆರೆ ಜಿಲ್ಲೆಯ ಶ್ವಾನದಳದ ‘ತಾರಾ’ ಬೆಸ್ಟ್ ಡಾಗ್ ಪ್ರಶಸ್ತಿ ಪಡೆಯಿತು.

ಪೊಲೀಸ್ ಪೋಟೋಗ್ರಾಫಿ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ವಿಡಿಯೋಗ್ರಾಫಿಯಲ್ಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಯ ಪೊಲೀಸ್ ಪೋಟೋಗ್ರಾಫರ್ ಪ್ರಶಾಂತ್ ಕುಮಾರ ಬಾಜನರಾದರು.

ಕಾರ್ಯಕ್ರಮದಲ್ಲಿ ಎಸ್ಪಿ ಉಮಾ ಪ್ರಶಾಂತ್ , ಹಾವೇರಿ ಎಸ್ಪಿ ಯಶೋಧಾ ವಂಟಗೋಡಿ, ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಎಎಸ್ಪಿ ಪರಮೇಶ್ವರ ಹೆಗಡೆ, ವಲಯ ಮಟ್ಟದ ಕ್ರೀಡಾಕೂಟದ ನೂಡಲ್ ಅಧಿಕಾರಿ ಡಿವೈಎಸ್ಪಿ ರುದ್ರೇಶ್ ಎ ಕೆ ಹಾಗೂ ಡಿವೈಎಸ್ಪಿ ಶ ಪಿ ಬಿ ಪ್ರಕಾಶ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *