ದಾವಣಗೆರೆ: ದಾವಣಗೆರೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ (ಎಸ್ಪಿ) ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿದೆ. ಅವರ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಶೇಖರ್ ಎಚ್. ತೆಕ್ಕಣ್ಣನವರ್ ಅವರನ್ನು ನೂತನ ಎಸ್ಪಿಯಾಗಿ ನಿಯೋಜಿಸಲಾಗಿದೆ.
ಬೆಂಗಳೂರಿನ ಗುಪ್ತಚರ ವಿಭಾಗದ ಎಸ್ಪಿಯಾಗಿದ್ದ ಎಚ್ .ಟಿ. ಶೇಖರ್ ದಾವಣಗೆರೆಗೆ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಉಮಾ ಪ್ರಶಾಂತ್ ಅವರಿಗೆ ಸ್ಥಳ ತೋರಿಸಿಲ್ಲ.
ನೂತನ ಎಸ್ಪಿ ಮೂಲತಃ ಎಲ್ಲಿಯರು..?
ನೂತನ ಎಸ್ಪಿ ಎಚ್ .ಟಿ. ಶೇಖರ್ ಮೂಲತಃ ಬಾಗಲಕೋಟೆ ಜಿಲ್ಲೆಯವರು. ಪಶು ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರು. ತೀರ್ಥಹಳ್ಳಿ, ಹಿರಿಯೂರಲ್ಲಿ ಡಿವೈಎಸ್ಪಿ, ಶಿವಮೊಗ್ಗ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಮೈಸೂರು ಪೊಲೀಸ್ ಕಮಿಷನರೇಟ್ ಡಿಸಿಪಿ, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ.
ದಾವಣಗೆರೆ: ಮಾಜಿ ಸೈನಿಕರಿಗೆ ಸರ್ಕಾರಿ ಜಮೀನು, ನಿವೇಶ ಪಡೆಯಲು ಅರ್ಜಿ ಆಹ್ವಾನ



