ದಾವಣಗೆರೆ ಬಿಜೆಪಿಯಲ್ಲಿ ಒಗ್ಗಟ್ಟು; ಯಾರಿಗೇ ಟಿಕೆಟ್ ಕೊಟ್ಟರು ಕೆಲಸ; ವಿನಯ್ ಕುಮಾರ್ ಗೆ ಟಿಕೆಟ್ ನೀಡಿದರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಲೋಕಸಭೆ ಚುನಾವಣೆ ಬಳಿಕ ಸದಾ ಒಂದಿಲ್ಲೊಂದು ಭಿನ್ನಮತದಿಂದ ಒಡೆದ ಮನೆಯದಂತಾಗಿದ್ದ  ದಾವಣಗೆರೆ ಬಿಜೆಪಿಯಲ್ಲಿ (davangere Bjp) ಈಗ ಒಗ್ಗಟ್ಟು ಪ್ರದರ್ಶನವಾಗಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿಯ ಎಲ್ಲ ಆಕಾಂಕ್ಷಿಗಳು ಒಂದೇ ವೇದಿಕೆಯಡಿ ಬಂದು ತಮ್ಮ ಭಿನ್ನಮತ‌ಮರೆತು ಒಗ್ಗಟ್ಟಿನ ಪ್ರದರ್ಶನ ಮಾಡಿದರು.

ದಾವಣಗೆರೆ, ಬಾಗಲಕೋಟೆಗೆ ಏ.9 ಚುನಾವಣೆ; ಮೇ 4ರಂದು ಫಲಿತಾಂಶ

ಒಂದೇ ವೇದಿಯಲ್ಲಿ ಬಿಜೆಪಿ ನಾಯಕರು

ಸುದ್ದಿಗೋಷ್ಠಿಯಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಯಶವಂತರಾವ್‌ಜಾಧವ್, ಬಿ.ಜಿ. ಅಜಯ್ ಕುಮಾರ್, ಶ್ರೀನಿವಾಸ್ ದಾಸಕರಿಯಪ್ಪ, ದೇವರಮನಿ ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್ ಹಾಜರಿದ್ದರು. ನಮ್ಮನ್ನು ಬಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟು, ಹೈಕಮಾಂಡ್ ಗೆಲ್ಲಿಸಿಕೊಂಡು ಬರುವಂತೆ ಸೂಚನೆ ನೀಡಿದ್ರೆ ತನು, ಮನ, ಧನದೊಂದಿಗೆ ಗೆಲುವಿಗೆ ಶ್ರಮಿಸುತ್ತೇವೆ ಎಂದರು.

ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿ ಮಾತು ನಂಬಿ 47.85 ಲಕ್ಷ ಕಳೆದುಕೊಂಡ ಮಹಿಳೆ..!!

ಹೈಕಮಾಂಡ್  ನಿರ್ಧಾರಕ್ಕೆ ಬದ್ಧ

ಅಜಯ್ ಕುಮಾರ್ ಮಾತನಾಡಿ, ಸ್ವಾಭಿಮಾನ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಅವರ ಹೆಸರು ಸಹ ಕೇಳಿ ಬರುತ್ತಿದೆ. ಅವರೇನು ನಮ್ಮ ವೈರಿಗಳಲ್ಲ. ಅವರೂ ಸ್ವಾಭಿಮಾನಿ ಬಳಗ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾರೆ. ಪಕ್ಷದ ವರಿಷ್ಠರು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧರಾಗಿ ಬಿಜೆಪಿಯ ಗೆಲುವಿಗಾಗಿ ಒಂದಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಸದನಕ್ಕೆ ತಪ್ಪು ಉತ್ತರ ನೀಡಿ ಪೇಚಿಗೆ ಸಿಲುಕಿದ ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್: ವಿಪಕ್ಷ ತರಾಟೆ

ನಮಗೆ ದಾವಣಗೆರೆ ದಕ್ಷಿಣದಲ್ಲಿ ಗೆಲುವೇ ಮುಖ್ಯ. ನೂರಕ್ಕೆ ನೂರರಷ್ಟು ಬಿಜೆಪಿ ಗೆಲ್ಲಿಸುತ್ತೇವೆ. ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಬಿಜೆಪಿ ಭಾಗವೂ ಆಗಿಲ್ಲ. ಪಕ್ಷ ಎಂದ‌ಮೇಲೆ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇರುವುದು ಸಹಜ. ಈಗ ಎಲ್ಲ ಬಗೆಹರಿದಿವೆ. ಆಕಾಂಕ್ಷಿಗಳು ಮಾತ್ರವಲ್ಲ ನಾಯಕರೂ ಒಂದೇ ಆಗಿದ್ದಾರೆ. ಬರೀ ದಕ್ಷಿಣ ಉಪ ಚುನಾವಣೆ ಮಾತ್ರವಲ್ಲ ಮುಂದೆಯೂ ಇದೇ ಒಗ್ಗಟ್ಟು ಮುಂದುವರಿಯಲಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಪಕ್ಷದ ಕೋರ್ ಸಮಿತಿ ಸಭೆಯಲ್ಲಿ ಎಲ್ಲ ಆಕಾಂಕ್ಷಿಗಳು ಭಾಗವಹಿಸಿದ್ದೆವು. ಈವರೆಗೆ ನಡೆದಿರುವುದನ್ನು ಮರೆತು ಒಂದಾಗಿ ಪಕ್ಷದ ಕೆಲಸ ಮಾಡಬೇಕು ಎಂದು ಮುಖಂಡರು ತಿಳಿಸಿದ್ದಾರೆ. ಅದರಂತೆ ನಾವೆಲ್ಲರೂ ಒಂದಾಗಿದ್ದೇವೆ. ಪಕ್ಷಕ್ಕಾಗಿ ಕೆಲಸ ಮಾಡಿರುವಂತಹ ನಮ್ಮಲ್ಲಿ ಯಾರಿಗೆ ಟಿಕೆಟ್ ನೀಡಿದರೂ ಒಂದಾಗಿ ಗೆಲುವಿಗಾಗಿ ಕೆಲಸ ಮಾಡುತ್ತೇವೆ. ಮುಖಂಡರು ಸಹ ಪಕ್ಷದ ಕೆಲಸ ಮಾಡಿದಂತವರನ್ನು ಗುರುತಿಸಿ ಟಿಕೆಟ್ ನೀಡಬೇಕು ಎಂದು ಮನವಿ ಮಾಡುತ್ತಿರುವುದಾಗಿ ತಿಳಿಸಿದರು.

ನಾವು ಮಾತ್ರವಲ್ಲ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಎಚ್.ಸಿ. ಜಯಮ್ಮ, ರೈತ ಮುಖಂಡರ ಬಿ.ಎಂ. ಸತೀಶ್ ಸಹ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಅವರು ಸಹ ನಮ್ಮೊಂದಿಗೆ ಒಂದಾಗಿದ್ದಾರೆ. ಮೊದಲು ದೇಶ, ನಂತರ ಪಕ್ಷ, ಆನಂತರ ವ್ಯಕ್ತಿ.. ಎಂಬುದನ್ನು ಪಕ್ಷ ನಮಗೆ ಹೇಳಿ ಕೊಟ್ಟಿದೆ. ನಮ್ಮಲ್ಲಿ ಯಾವುದೇ ಬಣಗಳು ಇಲ್ಲ. ನಮಗೆ ದಕ್ಷಿಣದಲ್ಲಿ ಬಿಜೆಪಿ ಗೆಲುವೇ ಅಂತಿಮ ಗುರಿ. ಅದಕ್ಕಾಗಿ ನಾವು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂಬ ಸಂದೇಶವನ್ನು ಜನರಿಗೆ ನೀಡುತ್ತಿರುವುದಾಗಿ ತಿಳಿಸಿದರು

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *