ದಾವಣಗೆರೆ: ದಾವಣಗೆರೆ ಉಪ ಚುನಾವಣೆ ಬಳಿಕ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ, ಅಸಹಕಾರ, ರಾಜೀನಾಮೆ ಪರ್ವ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಸೋಲಿಸಲು ಪಕ್ಷ ಹಿರಿಯರು ಷಡ್ಯಂತರ ರೂಪಿಸಿದ್ರು ಎಂಬ ಆರೋಪ ಬಂದ ಹಿನ್ನೆಲೆ ಎಂಎಲ್ ಸಿ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ .ಎಸ್. ಮಲ್ಲಿಕಾರ್ಜುನ ಪ್ರತಿಕ್ರಿಯಿಸಿದ್ದು, ಜಬ್ಬಾರ್ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ ಎಂದು ಮಾಧ್ಯಮದವರನ್ನೇ ವ್ಯಂಗ್ಯ ರೀತಿಯಲ್ಲಿ ಪ್ರಶ್ನೆ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಜಬ್ಬಾರ್ ರಾಜೀನಾಮೆ ಬಗ್ಗೆ ನನಗೆ ಗೊತ್ತಿಲ್ಲ. ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ರಾ..? ಅಂತಾ ನಗುಮುಖದಲ್ಲಿಯೇ ಮರು ಪ್ರಶ್ನೆ ಮಾಡಿದರು. ಅವರು 1994 ಇದೇ ಕೆಲಸ ಮಾಡಿಕೊಳ್ಳುತ್ತಾ ಬಂದಿದ್ದಾರೆ ಎಂದು ಕಿಡಿಕಾರಿದರು.
ದಾವಣಗೆರೆ: ಸಮರ್ಥ್ ಶಾಮನೂರು ಸೋಲಿಸಲು ಪಕ್ಷದ ಹಿರಿಯರಿಂದ ದೊಡ್ಡ ಷಡ್ಯಂತ್ರ;ಸಲೀಂ ಅಹ್ಮದ್ ಆರೋಪ
ಪಕ್ಷದ ಋಣ ತೀರಿಸುವ ಕೆಲಸ ಮಾಡಲಿ
ಚಹಾ ಕುಡಿದರೆ, ಏನಾದರೂ ಸಹಾಯ ಮಾಡಿದರೆ ಅವರ ಋಣ ಇಟ್ಟುಕೊಳ್ಳಬೇಕು. ಕಾಂಗ್ರೆಸ್ ಪಕ್ಷ ಮೂರು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಪಕ್ಷದ ಋಣ ತೀರಿಸುವ ಕೆಲಸವನ್ನು ಅಬ್ದುಲ್ ಜಬ್ಬಾರ್ ಮಾಡಬೇಕಿತ್ತು ಎಂದು ಕಿಡಿಕಾರಿದರು.
ಅನರ್ಹ 14 ಲಕ್ಷ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಶಿಫ್ಟ್ ;ಆಹಾರ ಸಚಿವರ ಮಾಹಿತಿ
ಕರೆಯುವ ಅವಶ್ಯಕತೆ ಇರುವುದಿಲ್ಲ
ಪಕ್ಷದ ಅಧಿಕೃತ ಅಭ್ಯರ್ಥಿ ಪರ ಪ್ರಚಾರ ಮಾಡಲು ವರಿಷ್ಠರು ಜವಾಬ್ದಾರಿ ನೀಡಿದ ಮೇಲೆ ಪುನಃ ಕರೆಯುವ ಅವಶ್ಯಕತೆ ಇರುವುದಿಲ್ಲ. ಪಕ್ಷ ನಿಷ್ಠೆಯಿಂದ ಬಂದು ಪ್ರಚಾರ ಮಾಡಬೇಕಿತ್ತು. ನನ್ನನ್ನು ಯಾರೂ ಕರೆದಿಲ್ಲ ಎಂದು ಹೇಳುವುದರಲ್ಲಿ ಅರ್ಥವಿಲ್ಲ ಎಂದರು.
ಕುಟುಂಬ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ
ಶಾಮನೂರು ಕುಟುಂಬ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಉಪ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು ಸಂಪೂರ್ಣ ಬೆಂಬಲ ನೀಡಿದ್ದು, ಅಭ್ಯರ್ಥಿ ಸಮರ್ಥ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆಂಬ ವಿಶ್ವಾಸ ಇದೆ ಎಂದು ಹೇಳಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚನಾವಣೆಯಲ್ಲಿ ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
– ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
ಗೆಲುವು ನಿಶ್ಚಿತ
ಪ 1994ರಿಂದ ನಾನು ಚುನಾವಣೆ ನೋಡುತ್ತಾ ಬಂದಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ವಾತಾವರಣ ಇದೆ. ಗೆಲುವಿನ ಅಂತರ ಕಡಿಮೆಯಾದರೂ ಆಗಬಹುದು. ಆದರೆ, ಗೆಲುವು ಮಾತ್ರ ನಿಶ್ಚಿತ ಎಂದರು.
ಮತದಾರರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಕಾರ್ಯಕರ್ತರೂ ಚೆನ್ನಾಗಿದ್ದಾರೆ. ಮುಖಂಡರ ನಡುವೆ ಸಣ್ಣ ಪುಟ್ಟ ವಿಷಯಗಳಿರಬಹುದು. ಅದನ್ನು ದೊಡ್ಡದಾಗಿ ಬೆಳೆಸುವುದು ಬೇಕಿಲ್ಲ ಎಂದು ಮಲ್ಲಿಕಾರ್ಜುನ್ ಹೇಳಿದರು.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಎಲ್ಲಾ ಸಮಾಜ ಮುಖಂಡರು ಪ್ರಾಮಾಣಿಕವಾಗಿ ಚುನಾವಣೆ ಕೆಲಸವನ್ನು ಮಾಡಿದ್ದಾರೆ. ಜಮೀರ್ ಎಸ್ಡಿಪಿಐಗೆ ಬೆಂಬಲಿಸಿದ್ದಾರೆ ಎಂಬ ಹೇಳಿಕೆಯನ್ನು ತಳ್ಳಿ ಹಾಕಿದ ಸಚಿವರು ಉಪ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ್ದಾರೆ ಎಂದರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳಿಂದ ಹಿಡಿದು ಕೇಂದ್ರ ಮತ್ತು ರಾಜ್ಯ ನಾಯಕರು, ಪಕ್ಷದ ಜನಪ್ರತಿನಿಧಿಗಳು, ಕಾರ್ಯಕರ್ತರು ಹಗಲಿರುಳು ಶ್ರಮಿಸಿದ್ದಾರೆ. ನಮ್ಮ ಮನೆತನದ ಮೇಲೆ ಇಟ್ಟಿರುವ ವಿಶ್ವಾಸವನ್ನು ನಮ್ಮ ಸಮರ್ಥ್ ಉಳಿಸಿಕೊಂಡು ಹೋಗುತ್ತಾರೆ ಎಂಬ ನಂಬಿಕೆ ನನ್ನದು ಎಂದರು.



