Connect with us

Dvgsuddi Kannada | online news portal | Kannada news online

ಸಿದ್ದರಾಮಯ್ಯ ಸೊಕ್ಕಿನ, ಧಿಮಾಕಿನ ಮಾತಿಗೆ ಬೆಲೆ ಕೊಡಬೇಕಿಲ್ಲ: ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿಕೆ

ಪ್ರಮುಖ ಸುದ್ದಿ

ಸಿದ್ದರಾಮಯ್ಯ ಸೊಕ್ಕಿನ, ಧಿಮಾಕಿನ ಮಾತಿಗೆ ಬೆಲೆ ಕೊಡಬೇಕಿಲ್ಲ: ಮಾಜಿ ಸಿಎಂ ಯಡಿಯೂರಪ್ಪ ದಾವಣಗೆರೆಯಲ್ಲಿ ಹೇಳಿಕೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷ  ನಾಯಕ ಎಂಬುದನ್ನು ಮರೆತು, ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಸೊಕ್ಕಿನ, ಧಿಮಾಕಿನ ಮಾತಿಗೆ ಯಾರೂ ಬೆಲೆ ಕೊಡಲ್ಲ. ಈ ಚುನಾವಣೆ ಫಲಿತಾಂಶವೇ ಉತ್ತರ ಕೊಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆ-ಚಿತ್ರದುರ್ಗ  ವಿಧಾನ ಪರಿಷತ್ತು ಬಿಜೆಪಿ ಅಭ್ಯರ್ಥಿ ನವೀನ್ ಪರ ಆನಗೋಡು ಗ್ರಾಮದಲ್ಲಿ ಪ್ರಚಾರ ಸಭೆ ನಂತರ ಮಾತನಾಡಿದ ಅವರು,  ಸ್ವ-ಕ್ಷೇತ್ರದಲ್ಲಿ  ಸೋತಿರುವ ಸಿದ್ದರಾಮಯ್ಯ,  ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದರು.  ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧಿಸಿಲ್ಲವೋ ಅಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜತೆ ಮಾತನಾಡಿದ್ದೇನೆ.  ಹೀಗಾಗಿ ಜೆಡಿಎಸ್ ಅಭ್ಯರ್ಥಿ ಇಲ್ಲದೆ ಕಡೆಗಳಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಲಿಸುವ ವಿಶ್ವಾಸವಿದೆ ಎಂದರು.

ರಾಜ್ಯದ 25 ವಿಧಾನಪರಿಷತ್ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಈ ಕ್ಷೇತ್ರದ ಅಭ್ಯರ್ಥಿ ಕೆ.ಎಸ್.ನವೀನ್  ಸೇರಿ 15 ಕ್ಷೇತ್ರಗಳಲ್ಲಿ ಬಿಜೆಪಿ  ಗೆಲುವು ಸಾಧಿಸಲಿದೆ  ಎಂದು ವಿಶ್ವಾಸ ವ್ಯಕ್ತಪಡಿಸಿದರು.  ನವೀನ್ ಅವರು ಎರಡು ಬಾರಿ ಸೋತಿದ್ದಾರೆ. ಈ  ಬಗ್ಗೆ ಮತದಾರರಲ್ಲಿ ಅನುಕಂಪವಿದ್ದು, ನವೀನ್‌ಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಲಿದ್ದಾರೆಂಬ ವಿಶ್ವಾಸವಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top