Connect with us

Dvgsuddi Kannada | online news portal | Kannada news online

ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಂಡಿಲ್ಲ; ಶೋಕಾಸ್ ನೋಟಿಸ್ ಗೆ 72 ಗಂಟೆಯಲ್ಲಿ ಉತ್ತರ; ಶಾಸಕ ಹರೀಶ್‌

BP harish MLA Harihara

ದಾವಣಗೆರೆ

ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಂಡಿಲ್ಲ; ಶೋಕಾಸ್ ನೋಟಿಸ್ ಗೆ 72 ಗಂಟೆಯಲ್ಲಿ ಉತ್ತರ; ಶಾಸಕ ಹರೀಶ್‌

ದಾವಣಗೆರೆ: ಪಕ್ಷಕ್ಕೆ ಮುಜುಗರಕ್ಕೆ ಆಗುವಂತೆ ನಾನು ನಡೆದುಕೊಳ್ಳುವುದಿಲ್ಲ. ಪಕ್ಷದ ಶೋಕಾಸ್ ನೋಟಿಸ್ ಗೆ 72 ಗಂಟೆಯಲ್ಲಿ ಉತ್ತರ ನೀಡುತ್ತೇನೆ ಎಂದು ಶಾಸಕ ಬಿ.ಪಿ.ಹರೀಶ್‌ ಹೇಳಿದ್ದಾರೆ.

ಅಪಘಾತ; ಬೈಕ್ ಸವಾರ- ಪಾದಚಾರಿ ಇಬ್ಬರೂ ಸಾವು

ಸುದ್ದಿಗಾರರೊಂದಿಗೆ ಮಾತನಾಡಿ,ಕಾರ್ಯಕರ್ತರಿಗೆ ಒಳ್ಳೆ ದಿನಗಳು ಬಂದಿವೆ. ಶೋಕಾಸ್‌ ನೋಟಿಸ್‌ ನೀಡಿರುವುದರಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೈವಾಡ ಇಲ್ಲ. ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಿಗೆ ನ್ಯಾಯ ಸಿಗಬೇಕಿದೆ. ಈ ಬಗ್ಗೆ ವರಿಷ್ಠರ ಗಮನಕ್ಕೆ ತರಲು ಶೋಕಾಸ್‌ ನೋಟಿಸ್‌ ನೀಡಲಾಗಿದೆ. ಈ ಬಗ್ಗೆ 72 ಗಂಟೆಯಲ್ಲಿ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ಹೊಂದಾಣಿಕೆ ರಾಜಕಾರಣ ಕೊನೆಯಾಗಬೇಕು. ನಮ್ಮ ಪಕ್ಷದ ಕೆಲ ನಾಯಕರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಕಾಂಗ್ರೆಸ್‌ ಅಭ್ಯರ್ಥಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಚುನಾವಣೆಗೂ ಮುನ್ನವೇ ಇದನ್ನು ಪಕ್ಷದ ಗಮನಕ್ಕೆ ತರಲಾಗಿತ್ತು. ಮತ್ತೊಮ್ಮೆ ನೋಟಿಸ್ ಗೆ ಉತ್ತರಿಸುವ ಮೂಲಕ ವರಿಷ್ಠರಿಗೆ ಮನವರಿಕೆ ಮಾಡಿಕೊಲಾಗುವುದು. ಇನ್ನೀ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top