ಸಚಿವ ಸಂಪುಟ ವಿಸ್ತರಣೆ; ರೇಣುಕಾಚಾರ್ಯಗೆ ಬಾರದ ಫೋನ್ ಕರೆ, ಫುಲ್ ಟೆನ್ಷನ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಚಿವ ಸಂಪುಟ ವಿಸ್ತರಣೆಗೆ ನಾಳೆ ಸಂಜೆ 04 ಗಂಟೆಗೆ ಸಮಯ ನಿರ್ಧಾರವಾಗಿದೆ. 7 ನೂತನ ಸಚಿವರು ನಾಳೆ (ಜ.13) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಯಾರು ಸಚಿವರಾಗಿ ಪ್ರಮಾಣ ಸ್ವೀಕರಿಸುತ್ತಾರೆ ಎಂಬ ಬಗ್ಗೆ ಸಿಎಂ ಇನ್ನೂ ಗುಟ್ಟು ಬಿಟ್ಟು ಕೊಟ್ಟಿಲ್ಲ. ಆದರೆ, ಸಚಿವ ಆಕಾಂಕ್ಷಿಯಾಗಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರಿಗೆ ಯಾವುದೇ ಕರೆ ಬಾರದ ಹಿನ್ನೆಲೆ ಇಂದು ಫುಲ್ ಟೆನ್ಷನ್ ನಲ್ಲಿದ್ದರು.

ಇಂದು ಹೊನ್ನಾಳಿ, ನ್ಯಾಮತಿಯಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್,  ಸಂಸದ ಜಿ.ಎಂ. ಸಿದ್ದೇಶ್ವರ ಭಾಗಿಯಾಗಿದ್ದರು. ಆದರೆ, ಸಿಎಂ ಕಡೆಯಿಂದ ಯಾವುದೇ ಕರೆ ಬಾರದ ಹಿನ್ನೆಲೆ ರೇಣುಕಾರ್ಯ ಅವರು ಟೆನ್ಷನ್ ನಲ್ಲಿ ಇದ್ದರು. ಕಾರ್ಯಕ್ರಮ ಮಧ್ಯೆ ಫೋನಿನಲ್ಲಿ ಬ್ಯುಸಿಯಾಗಿದ್ದರು.

renukacharay dvgsuddi 23

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಹಿತಿ ಇಲ್ಲ. ನಾಳೆ ಸಂಪುಟ ವಿಸ್ತರಣೆ ಎನ್ನುವ ಬಗ್ಗೆ ಮಾಧ್ಯಮದಿಂದ ತಿಳಿದಿದ್ದೇನೆ. ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು ಎಂಬುದು ಜನರ ಮತ್ತು ಕಾರ್ಯಕರ್ತ ಒತ್ತಾಯವಾಗಿತ್ತು. ಆದರೆ, ಇದುವರೆಗೆ ನನಗೆ ಯಾವುದೇ ಕರೆ ಬಂದಿಲ್ಲ. ಸಂಜೆ ವರೆಗೆ ಕಾದು ನೋಡುತ್ತೇನೆ. ನಾಳೆ ಬೆಳಗ್ಗೆ ಕೋರ್ಟ್ ಇದೆ. ಹೀಗಾಗಿ ಬೆಂಗಳೂರಿಗೆ ಹೋಗುತ್ತೇನೆ. ನಂತರ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *