Connect with us

Dvgsuddi Kannada | online news portal | Kannada news online

ಪಕ್ಷದ ವರಿಷ್ಠರು ಗ್ರಾಮ ಪಂಚಾಯತಿಯಲ್ಲಿ ಸ್ಪರ್ಧೆ ಮಾಡಿ ಎಂದ್ರೂ ಸಿದ್ಧ: ಸಂಸದ ಜಿ.ಎಂ.‌ಸಿದ್ದೇಶ್ವರ

gm siddeshvwara 5

ದಾವಣಗೆರೆ

ಪಕ್ಷದ ವರಿಷ್ಠರು ಗ್ರಾಮ ಪಂಚಾಯತಿಯಲ್ಲಿ ಸ್ಪರ್ಧೆ ಮಾಡಿ ಎಂದ್ರೂ ಸಿದ್ಧ: ಸಂಸದ ಜಿ.ಎಂ.‌ಸಿದ್ದೇಶ್ವರ

ದಾವಣಗೆರೆ: ಮುಂದಿನ ವಿಧಾನಸಭೆ ಚುನಾವಣೆಗೆ ನಮ್ಮ ವರಿಷ್ಠರು ರಾಜ್ಯದಲ್ಲಿ ಎಲ್ಲಿಯಾದರೂ ಸ್ಪರ್ಧೆ ಮಾಡಿ ಎಂದರೂ‌ ಸಿದ್ಧನಿದ್ದೇನೆ. ನಮ್ಮ ನಾಯಕರು ಗ್ರಾಮ ಪಂಚಾಯತಿಯಲ್ಲಿ ಸ್ಪರ್ಧೆ ಮಾಡಿ ಎಂದರೂ ಅದಕ್ಕೂ ಸಿದ್ಧ‌ ಎಂದು ಸಂಸದ ಜಿಎಂ ಸಿದ್ದೇಶ್ವರ ‌ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ. ಶಾಸಕ ಎಸ್‌. ಎ. ರವೀಂದ್ರನಾಥ್ ಅವರಿಗೆ ಟಿಕೆಟ್ ಕೊಡಬೇಕು ಎಂದು ವರಿಷ್ಠರನ್ನು ಒತ್ತಾಯಿಸಿದ್ದೇವೆ. ಒಂದು ವೇಳೆ ರವೀಂದ್ರನಾಥ್ ಅಭ್ಯರ್ಥಿ ಆಗದಿದ್ದರೆ ಒಳ್ಳೆ ಅಭ್ಯರ್ಥಿ ನಿಲ್ಲಿಸುತ್ತೇವೆ. ಪಕ್ಷದ ವರಿಷ್ಠರು ಹೇಳಿದರೆ ರಾಜ್ಯ ರಾಜಕಾರಣ ಅಲ್ಲ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಸ್ಪರ್ಧಿಸಲು ಸಿದ್ಧ ಎಂದು ತಿಳಿಸಿದರು.

ನಾನು ಜಿಲ್ಲೆಯ ಚುನಾವಣೆ ಸಾರಥ್ಯ ವಹಿಸುವುದಿಲ್ಲ. ಆದರೆ, ನಮ್ಮ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಿಸುತ್ತೇನೆ. ನಾನು ರಾಜ್ಯ ಕಾರಣಕ್ಕೆ ಬರುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು, ಪಕ್ಷ ಹೇಳಿದರೆ ನಾನು ಮನೆಗೆ ಹೋಗಿ ಅಂದರೆ ಹೋಗ್ಬೇಕು ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top