ದಾವಣಗೆರೆ: ಒಂದು ಕುಟುಂಬಕ್ಕೆ ಒಂದು ಟಿಕೆಟ್ ನೀತಿ ಕಾಂಗ್ರೆಸ್ ನಲ್ಲಿಲ್ಲ. ನಾವು ಕೇಳಿದರೆ ನಮ್ಮ ಕುಟುಂಬಕ್ಕೆ ನಾಲ್ಕು ಟಿಕೆಟ್ ಕೊಡ್ತಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್. ಎಸ್. ಮಲ್ಲಿಕಾರ್ಜುನ್ ಟಿಕೆಟ್ಗೆ ಅರ್ಜಿ ಸಲ್ಲಿಸದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಮಲ್ಲಿಕಾರ್ಜನ ಅವರನ್ನೇ ಕೇಳಬೇಕು. ಅರ್ಜಿ ಸಲ್ಲಿಸುವ ಬಗ್ಗೆ ಏನೂ ಮಾತನಾಡಿಲ್ಲ. ಆ ವಿಚಾರದಲ್ಲಿ ಅವರು ಸ್ವಂತ ಅಭಿಪ್ರಾಯ ಮುಖ್ಯ ಎಂದರು.