ದಾವಣಗೆರೆ:ರೇಣುಕಾಚಾರ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿಗೆ ಬ್ಲಾಕ್ಮೇಲ್ ಮಾಡಲು ಇಂತಹ ಹೇಳಿಕೆ ನೀಡುತ್ತಿದ್ದು, ಅವರೊಬ್ಬ ಡಬಲ್ ಗೇಮ್ ರಾಜಕಾರಣಿ. ಅವರ ಅಗತ್ಯ ಕಾಂಗ್ರೆಸ್ಗೆ ಇಲ್ಲ. ಸೋಲಿನಿಂದ ಕಂಗೆಟ್ಟಿರುವ ಅವರು ಮತಿಭ್ರಮಣೆಯಾದಂತೆ ವರ್ತಿಸುತ್ತಿದ್ದಾರೆಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೇಣುಕಾಚಾರ್ಯ ಹೇಳಿಕೆ ಕಾಂಗ್ರೆಸ್ ಗೆ ಕಿರಿಕ್ ಆಗುತ್ತಿದೆ. ಅಚರ ಹೇಳಿಕೆಗಳು ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಗೊಂದಲ ಮೂಡಿಸುತ್ತಿವೆ. ಅವರು ಕಾಂಗ್ರೆಸ್ಗೆ ಬೇಡ. ರೇಣುಕಾಚಾರ್ಯ ಕಾಂಗ್ರೆಸ್ಗೆ ಬರುವುದನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ತಿಳಿಸಿದರು
ಮಾಜಿ ಸಚಿವರು ಹೊನ್ನಾಳಿ ಅಭಿವೃದ್ಧಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲು ಹೋಗಿದೆ ಎನ್ನುತ್ತಾರೆ. ಅವರು ಅಧಿಕಾರದಲ್ಲಿ ಅಭಿವೃದ್ಧಿ ಯಾಕೆ ಮಾಡಲಿಲ್ಲ. ಹೊನ್ನಾಳಿ ಅಭಿವೃದ್ಧಿ ಬಗ್ಗೆ ಮಾತನಾಡಲು ನಮ್ಮ ಪಕ್ಷದ ಶಾಸಕರು ಇದ್ದಾರೆ. ಯಾವುದೇ ಕಾರಣಕ್ಕೂ ರೇಣುಕಾಚಾರ್ಯ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಡುವುದಿಲ್ಲ.
ಅವರು ಬಿಜೆಪಿ ವಿರುದ್ಧವೇ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದು ಎಲ್ಲರಿಗೂ ತಿಳಿದಿದೆ.ನಾವು ಹಿಂದಿನಿಂದಲೂ ರೇಣುಕಾಚಾರ್ಯ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಈಗ ಪಕ್ಷಕ್ಕೆ ಅವರನ್ನು ಏಕೆ ಸೇರಿಸಿಕೊಳ್ಳಬೇಕು.ಬಿಜೆಪಿ ಶಿಸ್ತಿನ ಪಕ್ಷ ಎನ್ನುತ್ತಾರೆ.ರೇಣುಕಾಚಾರ್ಯಗೆ ನೋಟಿಸ್ ನೀಡಿದರೂ ಅವರು ಏಕೆ ಉತ್ತರ ನೀಡಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಕೆ.ಜಿ. ಶಿವಕುಮಾರ್, ಅನಿತಾಬಾಯಿ ಮಾಲತೇಶ್, ಡೋಲಿ ಚಂದ್ರು, ರಾಜೇಶ್ವರಿ, ದಾಕ್ಷಾಯಿಣಮ್ಮ, ಹರೀಶ್ ಬಸಾಪುರ ಇದ್ದರು.



