Connect with us

Dvgsuddi Kannada | online news portal | Kannada news online

ದಾವಣಗೆರೆ: ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಿವನಹಳ್ಳಿ ರಮೇಶ್ ; ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಕೈ ಹಿಡಿದ ವಾಗೀಶ್ ಸ್ವಾಮಿ

ದಾವಣಗೆರೆ

ದಾವಣಗೆರೆ: ಕಾಂಗ್ರೆಸ್ ತೆರೆದು ಬಿಜೆಪಿ ಸೇರಿದ ಶಿವನಹಳ್ಳಿ ರಮೇಶ್ ; ಬಿಜೆಪಿಗೆ ಕೈಕೊಟ್ಟು ಕಾಂಗ್ರೆಸ್ ಕೈ ಹಿಡಿದ ವಾಗೀಶ್ ಸ್ವಾಮಿ

ದಾವಣಗೆರೆ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ‌‌ ಕಣ ರಂಗೇರುತ್ತಿದ್ದು, ರಾಜಕೀಯ ನಾಯಕರ ಪಕ್ಷಾಂತರ ಪರ್ವ ಶುರುವಾಗಿದೆ. ಇಂದು ಜಿಲ್ಲೆಯ ಸ್ಥಳೀಯ ನಾಯಕರು ಕಾಂಗ್ರೆಸ್ ನಿಂದ ಬಿಜೆಪಿಗೆ, ಬಿಜೆಪಿಯಿಂದ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ದಾವಣಗೆರೆ ನಗರಸಭೆಯ ಮಾಜಿ ಅಧ್ಯಕ್ಷ ಶಿವನಹಳ್ಳಿ ರಮೇಶ್ ಅವರು ಕಾಂಗ್ರೆಸ್ ತೊರೆದು ಸಂಸದ ಡಾ.ಜಿ.ಎಂ. ಸಿದ್ದೇಶ್ವರ, ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಅವರೊಂದಿಗೆ ಕಾಂಗ್ರೆಸ್ ಮುಖಂಡ ಬೆಳ್ಳೊಡಿ ಮಂಜುನಾಥ್, ಶಿವನಹಳ್ಳಿಯ ಗ್ರಾಮಸ್ಥರು ಸೇರ್ಪಡೆಯಾದರು.

ಮತ್ತೊಂದೆಡೆ ಬಿಜೆಪಿಯ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಎಂ. ವಾಗೀಶ್ ಸ್ವಾಮಿ ಅವರು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಗೃಹ ಕಚೇರಿಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ವಾಗೀಶ್ ಸ್ವಾಮಿ ಜೊತೆಗೆ ಮಲೇಬೆನ್ನೂರಿನ ನಾಲ್ವರು ಪುರಸಭೆ ಸದಸ್ಯರು, ಹರಿಹರ ತಾಲೂಕಿನ ಬಿಜೆಪಿ ಮುಖಂಡರು ಸಚಿವರ ಸಮ್ಮುಖದಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಹರಿಹರ ಮಾಜಿ ಶಾಸಕ ಎಸ್. ರಾಮಪ್ಪ, ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top