ಮುಡಾ, ವಾಲ್ಮೀಕಿ ಹಗರಣ; ಸಿಎಂ‌ ಸಿದ್ದರಾಮಯ್ಯ ರಾಜೀನಾಮೆಗೆ ಸಂಸದ ಗೋವಿಂದ ಕಾರಜೋಳ ದಾವಣಗೆರೆಯಲ್ಲಿ ಆಗ್ರಹ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮತ್ತು ಸ್ವಜನಪಕ್ಷಪಾತದಲ್ಲಿ ತೊಡಗಿದೆ. ಸಾಚಾ ಎಂದು ಹೇಳಿಕೊಳ್ಳುತಿದ್ದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸ್ವಚ್ಛ ಇರುವದನ್ನು ಸಾಬೀತು ಪಡಿಸಬೇಕು. ಸರಕಾರದ ಖಜಾನೆಯಿಂದ ಹಣ ಬಿಡುಗಡೆಯಾಗಿದೆ. ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಂಸದ ಗೋವಿಂದ ಕಾರಜೋಳ ಅಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಎಂದರೆ ಹಗರಣಗಳ ಸರಮಾಲೆ. ಸ್ವಾತಂತ್ರ್ಯ ನಂತರ ಆಡಳಿತ ಮಾಡಿದ ಕಾಂಗ್ರೆಸ್‌ ನಲ್ಲಿ ಅನೇಕರು ಹಗರಣ ಮಾಡಿ ಜೈಲು ಸೇರಿದ್ದಾರೆ. ಕೆಲವರು ಜಾಮೀನು ಮೇಲೆ ಹೊರಗಿದ್ದಾರೆ. ಸರ್ಕಾರದಿಂದ ಬ್ಯಾಂಕ್ ದರೋಡೆಯಾಗಿದ್ದು ಕರ್ನಾಟಕ ಇತಿಹಾಸದಲ್ಲಿ ಈ ಹಿಂದೆ ಎಂದೂ ಆಗಿರಲಿಲ್ಲ. ಬ್ಯಾಂಕ್ ದರೋಡೆಯಲ್ಲಿ ಸರ್ಕಾರದ ಸಚಿವರೇ ಭಾಗಿಯಾಗಿದ್ದು ನಾಚಿಕೆಗೇಡಿನ ಸಂಗತಿ ಎಂದರು.

ರಾಷ್ಟ್ರೀಕೃತ ಬ್ಯಾಂಕ್ ಇರುವುದರಿಂದ ಇಡಿಯವರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತಿರುವವರನ್ನು ಬಂಧನ ಮಾಡುತ್ತಿದ್ದಾರೆ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *