Connect with us

Dvgsuddi Kannada | online news portal | Kannada news online

ಪರಿಷತ್ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ; ಹರೀಶ್ ಕೆ.ಎಲ್ ಬಸಾಪುರ

ದಾವಣಗೆರೆ

ಪರಿಷತ್ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ; ಹರೀಶ್ ಕೆ.ಎಲ್ ಬಸಾಪುರ

ದಾವಣಗೆರೆ: ರಾಜ್ಯದಲ್ಲಿ ನಡೆದ 25 ವಿಧಾನಪರಿಷತ್ ಸ್ಥಾನಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಹರೀಶ್ ಕೆ.ಎಲ್ ಬಸಾಪುರ ತಿಳಿಸಿದ್ದಾರೆ.

ಕಳೆದ ಬಾರಿ ನಡೆದ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು 25 ಸ್ಥಾನಗಳ ಪೈಕಿ 14 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಬಿಜೆಪಿ 6, ಜೆಡಿಎಸ್ 4, ಪಕ್ಷೇತರರು 1 ಸ್ಥಾನಗಳಿಸುವ ಮೂಲಕ ನಂತರದ ಸ್ಥಾನ ಪಡೆದಿದ್ದರು.  ಈಗ ನಡೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಹ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಾಗಿಲ್ಲ.  ಕಾಂಗ್ರೆಸ್-ಬಿಜೆಪಿ ಸಮವಾಗಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪರಾಕ್ರಮ ಮರೆದಿದೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 44225 ಮತ ಪಡೆಯುವ ಮೂಲಕ ಶೇಕಡ 48% ಪಡೆದರೆ, ಆಡಳಿತರೂಢ ಬಿಜೆಪಿ ಪಕ್ಷ 37283 ಮತ ಪಡೆಯುವ ಮೂಲಕ ಶೇಕಡ 41% ರೊಂದಿಗೆ ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದು, ಇದು ಸಾರ್ವಜನಿಕರು ಆಡಳಿತರೂಢ ಸರ್ಕಾರದ ವಿರುದ್ಧ ನೀಡಿದ ತೀರ್ಮಾನ ಹಾಗೂ ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ಸೂಚನೆ ಎಂದರು.

ಕೆಲವು ಕ್ಷೇತ್ರಗಳಲ್ಲಿ ಕೂದಲೆಳೆಯ ಅಂತರದಿಂದ ಪಕ್ಷ ಸೋತಿದ್ದು ಇಲ್ಲದಿದ್ದರೆ ಆಡಳಿತ ಪಕ್ಷಕ್ಕಿಂತ ಇನ್ನೂ ಹೆಚ್ಚಿನ ಸ್ಥಾನವನ್ನು ಕಾಂಗ್ರೆಸ್ ಪಕ್ಷ ಗಳಿಸುತಿತ್ತು, ಏನೇ ಆಗಲಿ ಪಕ್ಷದ ಮೇಲೆ ಅಭಿಮಾನವಿಟ್ಟು ಮತ ಚಲಾಯಿಸಿದ ಎಲ್ಲಾ ಮತದಾರರಿಗೂ ಪಕ್ಷವನ್ನು ಗೆಲುವಿನ ದಡ ಸೇರಿಸಿದ ಪಕ್ಷದ ಮುಖಂಡರಿಗೂ, ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು.

ಚಿತ್ರದುರ್ಗ ದಾವಣಗೆರೆ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಬಿ ಸೋಮಶೇಖರ್ ಕೊನೆಯ ಕ್ಷಣದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು ಸಹ ಕ್ಷೇತ್ರ ಸಂಚರಿಸಿ ಅಲ್ಪಾವಧಿಯಲ್ಲಿ ಹೆಚ್ಚಿನ ಮತ ಗಳಿಸಿದ್ದು, ಎರಡು ಬಾರಿ ಸೋತ ಅನುಕಂಪದ ಅಲೆ ಬಿಜೆಪಿ ಅಭ್ಯರ್ಥಿ ಕೈಹಿಡಿದಿದೆ ಎಂದ ಅವರು, ನಮ್ಮ ಪಕ್ಷದ ಅಭ್ಯರ್ಥಿಗೆ ಮತ ನೀಡಿದ ಅವಳಿ ಜಿಲ್ಲೆಯ ಮತದಾರರಿಗೂ, ಚುನಾವಣೆಯಲ್ಲಿ ಶ್ರಮಿಸಿದ ಪಕ್ಷದ ಮುಖಂಡರುಗಳಿಗೆ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top