ಒಪ್ಪಂದ ಆಗಿದ್ರೆ ಅಧಿಕಾರ ಹಂಚಿಕೆ ಆಗಲಿ; ನಾನು ಸಚಿವ ಸ್ಥಾನದ ಆಕಾಂಕ್ಷಿ; ಜಗಳೂರು ಶಾಸಕ ದೇವೇಂದ್ರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಜಗಳೂರು: ಸಿಎಂ ಮತ್ತು ಡಿಸಿಎಂ ನಡುವೆ ಅಧಿಕಾರ ಹಂಚಿಕೆ ಒಪ್ಪಂದ ಆಗಿದ್ರೆ, ಅಧಿಕಾರ ಬಿಟ್ಟು‌ ಕೊಡಲಿ.‌ ಹಾಗೆಯೇ ನಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಜಗಳೂರು ಕ್ಷೇತ್ರದ ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ನಾನು ಯಾರ ವಿರುದ್ಧವೂ ಆರೋಪ ಮಾಡಲ್ಲ

ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಹಂಚಿಕೆ ಆಗಲಿ ಎಂಬುವುದು ನನ್ನ ವೈಯಕ್ತಿಕ ಅಭಿಪ್ರಾಯ, ಆದರೆ ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಇಲ್ಲ. ಸಿಎಂ ಸ್ಥಾನ ಖಾಲಿ ಇಲ್ಲ ಅಂದ್ಮೇಲೆ ಅದರ ಬಗ್ಗೆ ಚರ್ಚೆ ಅನಗತ್ಯ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನನ್ನನ್ನು ಕರೆದು ಮಾತನಾಡಿಸಿದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಎಸ್​. ಮಲ್ಲಿಕಾರ್ಜುನ ಕೂಡ ನನ್ನನ್ನು ಕರೆದು ಮಾತನಾಡಿದ್ದಾರೆ. ನಾನು ಯಾರ ವಿರುದ್ಧವೂ ಆರೋಪ ಮಾಡಲ್ಲ. ನನ್ನ ಜಗಳೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದೇನೆ ಎಂದರು.

ನಾನು ಸಚಿವ ಸ್ಥಾನದ ಆಕಾಂಕ್ಷಿ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಪ್ರಾದೇಶಿಕ, ಜಾತಿವಾರು ‌ಲೆಕ್ಕಾಚಾರ ನಡೆದರೆ ನಾನು ಪ್ರಯತ್ನ ಮಾಡುತ್ರೇನೆ. ನಾನೇನು ಸನ್ಯಾಸಿ ಅಲ್ಲ, ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *