ದಾವಣಗೆರೆ: ಜಿಲ್ಲಾ ಬಿಜೆಪಿಯಲ್ಲಿ ಸಮಸ್ಯೆಗಳ ಬಗ್ಗೆ ಅರಿವಿದೆ. ಈ ಬಗ್ಗೆ ಎಲ್ಲರೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡು ದಾವಣಗೆರೆ ಉಪ ಚುನಾವಣೆ ಗೆಲ್ಲುವ ಪಣತೊಟ್ಟಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ದಾವಣಗೆರೆ: ತಜ್ಞ ವೈದ್ಯರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಬಿಜೆಪಿ ಕಾರ್ಯಕರ್ತರು, ನಾಯಕರಲ್ಲಿ ಸಣ್ಣ -ಪುಟ್ಟ ಸಮಸ್ಯೆ ಇದೆ. ಇದನ್ನು ಶೀಘ್ರವಾಗಿ ಎಲ್ಲರೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ತಿಳಿಸಿದರು.
ದಾವಣಗೆರೆ: ಉಚಿತ ಲಘು, ಭಾರೀ ವಾಹನ ಚಾಲನಾ ತರಬೇತಿ ಪರವಾನಗಿ ವಿತರಣೆ
ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ದೃಷ್ಠಿಯಿಂದ ನಾನು ಮತ್ತು ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರವಾಲ್ ಇಲ್ಲಿಗೆ ಬಂದಿದ್ದೇವೆ. ಸಮಸ್ಯೆ ಬಗೆಹರಿಸಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುತ್ತೇವೆಂದು ತಿಳಿಸಿದರು.
ದಾವಣಗೆರೆ ದಕ್ಷಿಣಕ್ಕೆ ಸೂಕ್ತ ಅಭ್ಯರ್ಥಿ
ದಾವಣಗೆರೆ ದಕ್ಷಿಣಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಈಗಾಗಲೇ 8-10 ಅಕಾಂಕ್ಷಿಗಳು ಇದ್ದಾರೆ. ಅದರಲ್ಲಿ ಸೂಕ್ತ ಅಭ್ಯರ್ಥಿ ಯಾರು..? ಎಂಬುದರ ಬಗ್ಗೆ ಎಲ್ಲರೂಂದಿಗೆ ಕುಳಿತು ತಿರ್ಮಾನ ಮಾಡಲಾಗುವುದು. ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಅವರ ಜೊತೆಗೂ ಉಪ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.
ದಾವಣಗೆರೆ:ಶ್ರೀಗುರುತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ
ಜಿಲ್ಲೆಯಲ್ಲಿ 150 ವಿಸ್ತಾರಕರು
ಪಕ್ಷ ಸಂಘಟನೆ ಬಗ್ಗೆ ಜಿಲ್ಲೆಯಲ್ಲಿ 150 ವಿಸ್ತಾರಕರು ಈಗಾಗಲೇ ಕೆಲಸ ಮಾಡುತ್ತಿದ್ದಾರೆ. ಬೂತ್ ಮಟ್ಟದ ಸಮಸ್ಯೆಗಳ ಬಗ್ಗೆ ಹಾಗೂ ಕಾರ್ಯಕರ್ತರ ಸಮಸ್ಯೆಗಳನ್ನು ತಿಳಿಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿ ಎಲ್ಲ ಸಮಸ್ಯೆ ಸರಿಪಡಿಸಿಕೊಂಡು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರವನ್ನು ಗೆಲ್ಲುವ ಪಣತೊಟ್ಟಿದ್ದೇವೆ ಎಂದರು.



