ದಾವಣಗೆರೆ: ಬೂದಿ ಮುಚ್ಚಿದ ಕೆಂಡದಂತಿದ್ದ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾ ಘಟಕ ಪುನರ್ ರಚನೆ ವಿರುದ್ಧ ಮಾಜಿ ಸಂಸದ ಜಿ.ಎಂ ಸಿದ್ದೇಶ್ವರ ಆಕ್ರೋಶ ವ್ಯಕ್ತಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಘಟಕ ಪುನರ್ ರಚನೆ ವೇಳೆ ಪಕ್ಷದ ಹಿರಿಯರ ಅಭಿಪ್ರಾಯ ಪಡೆಯದೇ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜಿಲ್ಲಾ ಘಟಕ ಪುನರ್ ರಚಿಸಿದ್ದಾರೆ ಕಿಡಿಕಾರಿದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ನೇಮಕಗೊಂಡಿದ್ದ ಮೂವರು ಪ್ರಧಾನ ಕಾರ್ಯದರ್ಶಿಗಳನ್ನು ಕೈಬಿಟ್ಟು ಜಿಲ್ಲಾ ಘಟಕ ಪುನರ್ ರಚಿಸಲಾಗಿದೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಹಿರಿಯ ನಾಯಕರ ಅಭಿಪ್ರಾಯ ಪಡೆಯದೇ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೃದಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಪಕ್ಷದ ಕಾರ್ಯಕರ್ತರಿಗೆ ಹಿರಿಯ ನಾಯಕ. ವಿಜಯೇಂದ್ರ ದೃಷ್ಟಿಯಲ್ಲಿ ಚಿಕ್ಕವನು. ನಮ್ಮ ಭಾವನೆಗಳಿಗೆ ಅವರು ಸ್ಪಂದಿಸುತ್ತಿಲ್ಲ. ಕರೆ ಮಾಡಿದರೂ ಸರಿಯಾಗಿ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಿದ್ದೇವೆ. ವರಿಷ್ಠರು ಸ್ಪಂದಿಸದೇ ಇದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.


