ದಾವಣಗೆರೆ: ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟ; ಜಿಲ್ಲಾ ಘಟಕ ಪುನರ್‌ ರಚನೆ ವಿರುದ್ಧ ಮಾಜಿ‌ ಸಂಸದ ಆಕ್ರೋಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬೂದಿ ಮುಚ್ಚಿದ ಕೆಂಡದಂತಿದ್ದ ಜಿಲ್ಲಾ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದೆ. ಜಿಲ್ಲಾ ಘಟಕ ಪುನರ್‌ ರಚನೆ ವಿರುದ್ಧ ಮಾಜಿ‌ ಸಂಸದ ಜಿ.ಎಂ ಸಿದ್ದೇಶ್ವರ ಆಕ್ರೋಶ ವ್ಯಕ್ತಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಘಟಕ ಪುನರ್‌ ರಚನೆ ವೇಳೆ ಪಕ್ಷದ ಹಿರಿಯರ ಅಭಿಪ್ರಾಯ ಪಡೆಯದೇ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಜಿಲ್ಲಾ ಘಟಕ ಪುನರ್‌ ರಚಿಸಿದ್ದಾರೆ ಕಿಡಿಕಾರಿದರು.

ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ನೇಮಕಗೊಂಡಿದ್ದ ಮೂವರು ಪ್ರಧಾನ ಕಾರ್ಯದರ್ಶಿಗಳನ್ನು ಕೈಬಿಟ್ಟು ಜಿಲ್ಲಾ ಘಟಕ ಪುನರ್‌ ರಚಿಸಲಾಗಿದೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಹಿರಿಯ ನಾಯಕರ ಅಭಿಪ್ರಾಯ ಪಡೆಯದೇ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ. ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಹೃದಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಪಕ್ಷದ ಕಾರ್ಯಕರ್ತರಿಗೆ ಹಿರಿಯ ನಾಯಕ. ವಿಜಯೇಂದ್ರ ದೃಷ್ಟಿಯಲ್ಲಿ ಚಿಕ್ಕವನು. ನಮ್ಮ ಭಾವನೆಗಳಿಗೆ ಅವರು ಸ್ಪಂದಿಸುತ್ತಿಲ್ಲ. ಕರೆ ಮಾಡಿದರೂ ಸರಿಯಾಗಿ ಮಾತನಾಡುವುದಿಲ್ಲ. ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಿದ್ದೇವೆ. ವರಿಷ್ಠರು ಸ್ಪಂದಿಸದೇ ಇದ್ದರೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *