ಸಿಎಂ ಯಡಿಯೂರಪ್ಪ ಆಧುನಿಕ ಬಸವಣ್ಣ: ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವೀರಶೈವ-ಲಿಂಗಾಯ ಅಭಿವೃದ್ಧಿ ನಿಗಮಕ್ಕೆ  500 ಕೋಟಿ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ ಆಧುನಿಕ ಬಸವಣ್ಣ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಸಿಎಂ ಚರ್ಚೆ ಮಾಡಿ ಹಣ ಬಿಡುಗಡೆ ಮಾಡಿದ್ದಾರೆ. ನಿಗಮಕ್ಕೆ ಕೊಟ್ಟಿದ್ದು ತಪ್ಪೇನಿಲ್ಲ. ಅಂದು ಬಸವಣ್ಣನವರು ಸಾಮಾಜಿಕ ನ್ಯಾಯ ಕೊಟ್ಟಿದ್ದರು.  ಅದೇ ರೀತಿ ಇಂದು ಯಡಿಯೂರಪ್ಪ ಅವರು  ಸಾಮಾಜಿಕ ನ್ಯಾಯ ಒದಗಿಸಿದ್ದಾರೆ. ಹೀಗಾಗಿ ಯಡಿಯೂರಪ್ಪ ಆಧುನಿಕ ಬಸವಣ್ಣ ಎಂದರು.

9dda3c04 f147 4c2b b615 2b3db19efaae

ಪಕ್ಷದಲ್ಲಿ ಎರಡು ಮೂರು ಬಾರಿ ಗೆದ್ದವರಿಗೆ ಸಚಿವಸ್ಥಾನದ  ಅವಕಾಶ ಕೊಡಿ. ಗೆದ್ದವರಿಗೆ ಮಾತ್ರ ಅವಕಾಶ ಕೊಡಿ ಎಂದು ಪಕ್ಷದ ವರಿಷ್ಠರು,  ಮುಖ್ಯಮಂತ್ರಿ ಅವರಿಗೆ ಕೇಳಿದ್ದೇವೆ.  ಸೋತ ವ್ಯಕ್ತಿಯಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. ಶಾಸಕರ ಬೆಂಬಲದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.

ದೊಂಬರಾಟದ ವಾಟಾಳ್ ನಾಗರಾಜ್ ನಿನಗೆ ತಾಕತ್ತಿದ್ದರೆ,  ಈ ರಾಜ್ಯ ಬಂದ್ ಮಾಡು ನೋಡೋಣ. ಸಿಎಂ ಬಗ್ಗೆ ಕೇವಲವಾಗಿ ಮಾತಾಡಿದರೇ ಹುಷಾರ್…! ನಾವು ಬಂದ್ ಯಶಸ್ವಿ ಆಗದಂತೆ ನೋಡಿಕೊಳ್ಳುತ್ತೇವೆ. ನಿನಗೆ ತಾಕತ್ತು ಇದ್ದರೆ ಬಂದ್ ಮಾಡು ನೋಡಣ ಎಂದ ಅವರು,  ವಾಟಾಳ್ ಬುಟಾಟಿಕೆ ವ್ಯಕ್ತಿ. ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರ‌ಮ ವಾಗಿ ವಶ ಪಡಿಸಿಕೊಂಡಿದ್ದಾರೆ. ಇವರ ಜಮೀನಿನಲ್ಲಿ ಕೆಲ್ಸಾ ಮಾಡುತ್ತಿರುವುದು ತಮಿಳರು.  ಬೆಂಗಳೂರಿನಲ್ಲಿ ಎಷ್ಟು ಸೈಟ್ ಇವೆ ಎಂಬ ಬಗ್ಗೆ  ನನ್ನ ಕಡೆ ದಾಖಲೆಗಳಿವೆ ಎಂದು ಕಿಡಿಕಾರಿದರು.

ಕೇಂದ್ರ ಮಾಜಿ ಸಚಿವ, ಶಾಸಕರು ಬಸವನಗೌಡ ಪಾಟೀಲ್ ಯತ್ನಾಳ್ ಅವರು  ಸಿಎಂಗೆ ಡೆಡ್ ಲೈನ್ ಕೊಡುವುದು ಸರಿಯಲ್ಲ. ನಮ್ಮ ಪಕ್ಷದ ಮುಖಂಡರನ್ನು ಗೌರವಿಸಬೇಕು.  ಹಾದಿ, ಬೀದಿಲಿ ನಿಂತು ಮಾತನಾಡುವುದರಿಂದ ಪಕ್ಷದ ಗೌರವ ಕಡಿಮೆಯಾಗುವುದಿಲ್ಲ. ಯಾರು ಮಾತನಾಡುತ್ತಾರೋ ಅವರ ವರ್ಚಸ್ಸು ಕಡಿಮೆಯಾಗುತ್ತೆ. ಇದು ಪಕ್ಷಕ್ಕೆ ಶೋಭೆ ತರುವ ವಿಚಾರವಲ್ಲ. ಬಸ್ ನಲ್ಲಿ ಟವಲ್ ಹಾಕಿ ಅಭ್ಯಾಸ. ಇಲ್ಲಿ ಸೀಟ್ ಖಾಲಿ ಇಲ್ಲ. ಮುಖ್ಯಮಂತ್ರಿ ಗಳ ಕುರ್ಚಿ ಕೂಡ ಖಾಲಿ‌ ಇಲ್ಲ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *