ದಾವಣಗೆರೆ; ನಾನು ಬಿಜೆಪಿಗೆ ಬೇಡವಾಗಿದ್ದೇನೆ; ಮಾಜಿ ಸಚಿವ ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಬಿಜೆಪಿಯಲ್ಲಿ ಸಮರ್ಥ ನಾಯಕತ್ವ ಕೊರತೆ ಇದೆ. ನಾನು ಸಹ ಬಿಜೆಪಿಗೆ ಬೇಡವಾಗಿದ್ದೇನೆ ಎಂದು ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಿಂದ ಒಬೊಬ್ಬರೇ ನಾಯಕರು ಪಕ್ಷ ಬಿಟ್ಟು ಹೋಗುತ್ತಿದ್ದಾರೆ. ನನಗೆ ಫೋನ್ ಮಾಡಿ ಹೇಳುತ್ತಿದ್ದಾರೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೋ ಹೇಳಿಲ್ಲ. ಹೊನ್ನಾಳಿ – ನ್ಯಾಮತಿ ತಾಲ್ಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡಿದ್ದೇನೆ. ಬಾಕಿ ಅನುದಾನ ಬಾಕಿ ಬಿಡುಗಡೆ ಮಾಡುವಂತೆ ಸಚಿವರನ್ನು ಭೇಟಿ ಮಾಡಿದ್ದೇನೆ ಅಷ್ಟೇ ಎಂದರು.

ಹೊನ್ನಾಳಿ – ನ್ಯಾಮತಿ ತಾಲೂಕಿನಲ್ಲಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆಗಳ ಕರ ಪತ್ರ ಹಂಚಿದ್ದೇವೆ, ಪಕ್ಷದ ಪರವಾಗಿಯೇ ಕೆಲಸ ಮಾಡಿದ್ದೇನೆ.ಆದರೆ, ಪಕ್ಷದ ನಾಯಕರ ಮೇಲೆ ನೋವಾಗಿದೆ. ರಾಜೂ ಗೌಡ ಮತ್ತು ನನಗೂ ಅನ್ಯಾಯ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆರು ಸಚಿವ ಸ್ಥಾನ ಖಾಲಿ ಇದ್ದರೂ ಸಚಿವ ಸ್ಥಾನ ನೀಡಲಿಲ್ಲ. ಜಿಲ್ಲೆಯಲ್ಲಿ ಎಸ್ ಎ ರವೀಂದ್ರನಾಥ್ ರಿಗೆ ಸಚಿವ ಸ್ಥಾನ ಕೊಡಬಹುದಿತ್ತು. ಆದರೂ ಕೊಡಲಿಲ್ಲ. ಐವರು ಶಾಸಕರು ಇದ್ದರೂ ಸಚಿವ ಸ್ಥಾನ ಸಿಗಲಿಲ್ಲ. ಇದರಿಂದ ಬಿಜೆಪಿ ಅಭ್ಯರ್ಥಿಗಳು ಸೋಲಬೇಕಾಯಿತು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *