Connect with us

Dvgsuddi Kannada | online news portal | Kannada news online

ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ; ಸಿದ್ದರಾಮಯ್ಯ ಜೊತೆ‌ ಮುಂದೆ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ; ಶಾಮನೂರು ಶಿವಶಂಕರಪ್ಪ

IMG 20231002 201034

ದಾವಣಗೆರೆ

ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ; ಸಿದ್ದರಾಮಯ್ಯ ಜೊತೆ‌ ಮುಂದೆ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ; ಶಾಮನೂರು ಶಿವಶಂಕರಪ್ಪ

ದಾವಣಗೆರೆ; ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ. ನಮ್ಮ ಬಳಿಯೂ ದಾಖಲೆ ಇದೆ. ಮುಂದೆ ಸಿಎಂ ಸಿದ್ದರಾಮಯ್ಯ ಜೊತೆ‌ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಿಡಿಮಿಡಿಗೊಂಡರು.

ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿ ಅಂಶಗಳಿವೆ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿದ ಶಾಮನೂರು ಶಿವಶಂಕರಪ್ಪ, ಲಿಂಗಾಯತರಿಗೆ ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ. ನಮ್ಮ ಬಳಿಯೂ ದಾಖಲೆ ಇದೆ ಎಂದು ಕಿಡಿಕಾರಿದರು.

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ‌. ಒಂದು ಡಿಸಿ ಕೊಟ್ಟಿಲ್ಲ ಸರ್ಕಾರದಲ್ಲಿ ಏಳು ಸಚಿವ ಸ್ಥಾನ ನೀಡಿದ್ದಾರೆ. ಅದರ ಬಗ್ಗೆ‌ ಪ್ರಶ್ನೆ ಇಲ್ಲ. ನಮ್ಮ ಲಿಂಗಾಯತ ಸಮಾಜದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿರುವೆ. ನಾನು ಸತ್ಯ ಹೇಳಿದ್ದೇನೆ ಎಂದರು.

ನನ್ನ ಹೇಳಿಕೆಗೆ ಎಂಎ​ಲ್​ಸಿ ಹೆಚ್ ವಿಶ್ವನಾಥ ಹೇಳಿಕೆ ನೀಡಿದ್ದಾರೆ. ನಾನು ಸತ್ಯ ಹೇಳಿದ್ದೇನೆ.‌ ವಿಶ್ವನಾಥ ತರ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್​ಸಿ ಆಗಿಲ್ಲ.‌ ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ ಎಂದರು.

ಲಿಂಗಾಯತರಿಗೆ ಏಳು ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ಇನ್ನೆಷ್ಟು ‌ಮಂತ್ರಿ ಸ್ಥಾನ ಕೊಡಬೇಕು. ಲಿಂಗಾಯತ ನಾಯಕರು ಸಿದ್ದರಾಮಯ್ಯ ಅವರಿಂದಲೇ ಗೆದ್ದು ಬಂದಿರೋದು ಎಂದು ಹೆಚ್​.ವಿಶ್ವನಾಥ್ ಹೇಳಿದ್ದರು.

 

ತಲೆಕೆಟ್ಟು ಹುಚ್ಚು ಹಿಡಿದು ಏನೇನೋ ಮಾತಾಡ್ತಾರೆ; ಅಂಥವರನ್ನು ದೂರ ಇಡಬೇಕು; ಲಿಂಗಾಯತ ಸಮುದಾಯ ಬಗ್ಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿ

 

ಲಿಂಗಾಯತ ಸಮುದಾಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ; ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರೋದು; ನಿಮಗೆ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಕೊಡಬೇಕು..?

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top