ದಾವಣಗೆರೆ: ಪಂಚಮಸಾಲಿ, ಲಿಂಗಾಯತ, ಒಕ್ಕಲಿಗರಿಗೆ ಸರ್ಕಾರ ಮೀಸಲಾತಿ ಘೋಷಿಸಿದೆ. ಇಂದು ಸಂವಿಧಾನ ಬದ್ಧವಾಗಿ ಆಗಬೇಕು.ಒಕ್ಕಲಿಗರೇನೂ ಮೀಸಲಾತಿ ಕೇಳಿದ್ದರಾ..? ಇದೆಲ್ಲಾ ಚುನಾವಣಾ ಗಿಮಿಕ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ.ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ. ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯಾ.? ಅವರ ತಂತ್ರ ನಡೆಯಲ್ಲ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ರಾಜ್ಯದ ಜನರಿಗೆ ಬಿಜೆಪಿಯವರ ಕಳ್ಳಾಟ ಗೊತ್ತಾಗಿದೆ ಎಂದರು.
ಕಳಸಾ ಬಂಡೂರಿ ನಾಲಾ ವಿವಾದ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಚುನಾವಣಾ ಗಿಮಿಕ್. ಗೆಜೆಟ್ ನೋಟಿಫಿಕೇಶನ್ ಆಗಿ ಎರಡು ವರ್ಷವಾಯ್ತು. ಎರಡು ವರ್ಷ ಏನು ಮಾಡುತ್ತಿದ್ದರು. ಈಗ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಿಡಿಕಾರಿದರು.



