Connect with us

Dvgsuddi Kannada | online news portal | Kannada news online

ಎಸ್ಪಿಗೆ ಅವಹೇಳನಕಾರಿ ಕೇಸ್: ತನ್ನ ವಿರುದ್ಧ ದಾಖಲಾದ ಪ್ರಕರಣದ ಮೂಲ ಕಾರಣ ತಿಳಿಸಿದ ಶಾಸಕ ಬಿ.ಪಿ. ಹರೀಶ್; ಏನು ಕಾರಣ..?

ssm vs bp harish

ರಾಜಕೀಯ

ಎಸ್ಪಿಗೆ ಅವಹೇಳನಕಾರಿ ಕೇಸ್: ತನ್ನ ವಿರುದ್ಧ ದಾಖಲಾದ ಪ್ರಕರಣದ ಮೂಲ ಕಾರಣ ತಿಳಿಸಿದ ಶಾಸಕ ಬಿ.ಪಿ. ಹರೀಶ್; ಏನು ಕಾರಣ..?

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್ ಮಲ್ಲಿಕಾರ್ಜುಸ್​​​ (SS Mallikarjuna) ವಿರುದ್ಧ ಸದಾ ಬೆಂಕಿ ಉಗುಳುವ ಶಾಸಕ ಬಿ.ಪಿ. ಹರೀಶ್ , ಇತ್ತೀಚೆಗೆ ತಮ್ಮ ವಿರುದ್ಧ ಎಸ್ಪಿ ಉಮಾ ಪ್ರಶಾಂತ್ ದಾಖಲಿಸಿದ ಅವಹೇಳನಕಾರಿ ಹೇಳಿಕೆ  ಪ್ರಕರಣದ ಮೂಲ‌ ಕಾರಣ ತಿಳಿಸಿದ್ದಾರೆ.

ಅಧಿಕಾರಿ ಬಳಸಿಕೊಂಡು‌ ಎಫ್​​ಐಆರ್​ ದಾಖಲು

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಸದನದ ಒಳಗೂ ಮತ್ತು ಹೊರಗೆ ಶಾಮನೂರು ಮನೆತನದ ಅಕ್ರಮ ಬಗ್ಗೆ ಮಾತನಾಡಿದ್ದೆ. ಇತ್ತೀಚೆಗೆ ವಿಧಾನಸಭೆಯಲ್ಲಿ ಹರಿಹರದ ಚಿಕ್ಕಬಿದರಿ ಮತ್ತು ಹರಪನಹಳ್ಳಿಯ ದುಗ್ಗಾವತಿ ಗ್ರಾಮದಲ್ಲಿ ಶಾಮನೂರು ಮನೆತನದವರು ರೈತರ ಜಮೀನು ಕಿತ್ತುಕೊಂಡ ಬಗ್ಗೆ ಪ್ರಶ್ನೆ ಮಾಡಿದ್ದೆ.‌ ಇದೇ ದ್ವೇಷಕ್ಕೆ‌ ನನ್ನ ಮೇಲೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬಳಸಿಕೊಂಡು ಸಚಿವ ಮಲ್ಲಿಕಾರ್ಜುನ್​​ ಅವರೇ ಎಫ್​​ಐಆರ್​ ಮಾಡಿಸಿದ್ದಾರೆ ಎಂದು ತಿಳಿಸಿದರು.

ಎಸ್ಪಿ ಬೇಸರವಾಗಿದ್ದರೆ ನಾನೇನು ಮಾಡಲು ಆಗುವುದಿಲ್ಲ

ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧ. ಎಸ್​ಪಿಗೆ ನಾನು ಪೊಮೆರೇನಿಯನ್ ನಾಯಿ ಎಂದು ಹೇಳಿಲ್ಲ. ಪೊಮೆರೇನಿಯನ್ ನಾಯಿ ಮರಿಗಳಂತೆ ಅಧಿಕಾರಿಗಳು ಉಸ್ತುವಾರಿ ಸಚಿವರ ಹಿಂದೆ ಸುತ್ತುತ್ತಿದ್ದಾರೆ ಎಂದು ಹೇಳಿದ್ದೇನೆ. ಎಸ್​ಪಿ ಉಮಾ ಪ್ರಶಾಂಶ್​ಗೆ ಬೇಸರ ಆಗಿದ್ದರೆ ನಾನೇನು ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಭ್ರಷ್ಟರ ಪಾಲಿಗೆ ಡಾಬರಮನ್ ನಾಯಿಯೇ..!

ಸಚಿವರು ನನಗೆ ಡಾಬರಮನ್ ನಾಯಿ ಅಂದಿದ್ದಾರೆ. ನಾನು ಭ್ರಷ್ಟರ ಪಾಲಿಗೆ ಡಾಬರಮನ್ ನಾಯಿಯೇ. ಸಚಿವರಿಗೆ ಸ್ವಲ್ಪ ಹುಷಾರ್​​ ಆಗಿ ಇರಲು ಹೇಳಿ. ಡಾಬರಮನ್ ನಾಯಿ ಬಾಯಿ ಹಾಕಿದರೆ ಎಲ್ಲಿ ಹಾಕುತ್ತದೆ ಅವರಿಗೆ ಗೊತ್ತಿದೆ.ನಾನು ಅಷ್ಟು ಸುಲಭಕ್ಕೆ ಬಿಡುವ ಮನುಷ್ಯ ಅಲ್ಲ ಎಂದು ಸಚಿವ ಎಸ್‌ಎಸ್ ಮಲ್ಲಿಕಾರ್ಜುಸ್​​ ವಿರುದ್ಧ ಗುಡುಗಿದರು.

ಈ‌ ಹಿಂದ ವಿಜಯಕುಮಾರ್ ಕೊಂಡಜ್ಜಿ ಎಂಬಾತ ಹೃದಯಾಘಾತದಿಂದ ಮೃತಪಟ್ಟಿದ್ದರು. ಆಗಲೂ ಬಿ.ಪಿ.ಹರೀಶ್ ಹೊಡೆದು ಸಾಯಿಸಿದ್ದಾರೆ ಎಂದು ಎಫ್​​ಐಆರ್​ ಮಾಡಿಸಿದ್ದರು. ಈಗ ಎಸ್ಪಿ ಬಳಸಿಕೊಂಡು ದೂರು ದಾಖಲಿಸಿದ್ದಾರೆ.

ಮಲ್ಲಿಕಾರ್ಜುನ ವಿರುದ್ಧ ಯಾಕೆ ಕೇಸ್​ ದಾಖಲಿಸಿಲ್ಲ…?

ಹಿಂದೂಗಳು ಮೆರವಣಿಗೆ ಪ್ರತಿಭಟನೆ ಮಾಡಿದರೆ ಒದ್ದು ಒಳಗೆ ಹಾಕ್ತೇನೆ ಅಂತಾರೆ. ಸಚಿವ ಎಸ್​.ಎಸ್​.ಮಲ್ಲಿಕಾರ್ಜುನ ವಿರುದ್ಧ ಯಾಕೆ ಕೇಸ್​ ದಾಖಲಿಸಿಲ್ಲ. ಶಾಮನೂರು ಕುಟುಂಬದ ವಿರುದ್ಧ ನಿರಂತರ ಹೋರಾಟ ಮಾಡಿ ಗೆದ್ದಿದ್ದೇನೆ. ನನ್ನ ಹೋರಾಟ ನಿರಂತರ. ಈ ಹಿಂದೆ ಜಿಂಕೆ ಕೇಸ್​ನಲ್ಲಿ ಬಸವರಾಜ್ ಬೊಮ್ಮಾಯಿ ಸಿಎಂ ಆಗಿದ್ದಾಗ ಒಳ ಒಪ್ಪಂದ ಮಾಡಿ ಉಳಿದುಕೊಂಡರು. ಎಲ್ಲದಕ್ಕೂ ಕಾಲವೇ ಉತ್ತರಿಸಲಿದೆ ಎಂದು ಕಿಡಿಕಾರಿದ್ದಾರೆ.

ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್​..!!

ಇನ್ನು ಎಸ್​​ಪಿ ಉಮಾ ಪ್ರಶಾಂತ್ ವಿರುದ್ಧ ಕೀಳುಮಟ್ಟದ ಹೇಳಿಕೆ ವಿಚಾರವಾಗಿ ಶಾಸಕ ಬಿ.ಪಿ.ಹರೀಶ್​ಗೆ ಶಿಕಾರಿಪುರ ಡಿವೈಎಸ್​ಪಿಯಿಂದ ನೋಟಿಸ್​ ನೀಡಲಾಗಿದ್ದು, ಸೆ.17ರಂದು ಬೆಳಗ್ಗೆ 10 ಗಂಟೆಗೆ ಶಿಕಾರಿಪುರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.

ಈ ಪ್ರಕರಣ ವಿಚಾರವಾಗಿ ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಅರ್ಜಿ ರದ್ದು ಪಡಿಸಬೇಕೆಂದು ಕೋರಿ ಶಾಸಕ ಬಿಪಿ ಹರೀಶ್​​ ಹೈಕೋರ್ಟ ಮೊರೆ ಹೋಗಿದ್ದರು. ಶಾಸಕ ಬಿಪಿ ಹರೀಶ್ ವಿರುದ್ದ ಅವಸರದ ಕ್ರಮ ಬೇಡ ಎಂದು ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲು ನ್ಯಾಯಮೂರ್ತಿ ಎಂ.ಐ. ಅರುಣ್ ಆದೇಶಿಸಿದ್ದಾರೆ. ಎಸ್​​ಪಿ ಘನತೆಗೆ ಧಕ್ಕೆ ಬರುವವಂತೆ ಶಾಸಕ ಬಿಪಿ ಹರೀಶ್ ಹೇಳಿಕೆ ನೀಡಿಲ್ಲ. ಬದಲಿಗೆ ಸ್ಥಳೀಯ ಸಚಿವರು ಅಧಿಕಾರಿಗಳನ್ನ ಗೌರವದಿಂದ ನಡೆಸಿಕೊಳ್ಳುತ್ತಿಲ್ಲವೆಂದು ಹೇಳಿರುವುದಾಗಿ ಶಾಸಕ ಹರೀಶ್ ಪರ ವಕೀಲರು ವಾದ ಮಂಡಿಸಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top