ದಾವಣಗೆರೆ: ಜಿಲ್ಲೆಯಾದ್ಯಂತ ಎರಡು ದಿನ ಪೋಸ್ಟ್ ಆಫೀಸ್ ವಹಿವಾಟು ಬಂದ್ ; ಕಾರಣ ಏನು..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ವಿಭಾಗದ ಎಲ್ಲಾ ಪ್ರಧಾನ ಅಂಚೆ ಕಚೇರಿಗಳಲ್ಲಿ ಜೂನ್ 17 ರಿಂದ ಹೊಸ ತಂತ್ರಾಂಶ ಅಳವಡಿಕೆ ಮಾಡಬೇಕಾಗಿದೆ. ಹೀಗಾಗಿ ಜೂನ್ 14 ಮತ್ತು 16 ರಂದು ಜಿಲ್ಲೆಯ ಎಲ್ಲ ಉಪಶಾಖಾ ಅಂಚೆ ಕಚೇರಿಗಳಲ್ಲಿ ಯಾವುದೇ ರೀತಿಯ ವ್ಯವಹಾರ, ವಹಿವಾಟು ಇರುವುದಿಲ್ಲ.

ಎಲ್ಲೆಲ್ಲಿ ಬಂದ್..?

ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಹಾಗೂ ನ್ಯಾಮತಿ ತಾಲ್ಲೂಕಿನ ಎಲ್ಲ ಅಂಚೆ ಕಚೇರಿಗಳಲ್ಲಿ ಎರಡು ದಿನಗಳ ಕಾಲ ಯಾವುದೇ ವಹಿವಾಟು ಇರುವುದಿಲ್ಲ. ಎಲ್ಲಾ ಎಂಪಿಕೆಬಿವೈ ಏಜೆಂಟರು ಹಾಗೂ ಆವರ್ತಿತ ಠೇವಣೆ ಗ್ರಾಹಕರು, ಕ್ಯಾಲೆಂಡರ್ ತಿಂಗಳ 1 ರಿಂದ 15 ನೇ ತಾರೀಖಿನ ನಡುವೆ ತೆರೆಯಲಾದ ಖಾತೆಗಳಿಗೆ ದಂಡ ಪಾವತಿ ಇಲ್ಲದೇ ಜೂನ್ 12ರ ಒಳಗಾಗಿ ತಮ್ಮ ಆರ್‍ ಡಿ ಮಾಸಿಕ ಕಂತುಗಳನ್ನು ಜಮಾವಂತೆ ದಾವಣಗೆರೆ ವಿಭಾಗದ ಅಂಚೆ ಅಧೀಕ್ಷರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *