ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಂಸಿಸಿಬಿ 11ಕೆ.ವಿ. ಫೀಡರ್ ವ್ಯಾಪ್ತಿಯಲ್ಲಿ ಹಾಗೂ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿದ್ಯಾನಗರ 11 ಕೆ.ವಿ.ಫೀಡರ್ ವ್ಯಾಪ್ತಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಜಲಸಿರಿ ಯೋಜನೆಯಡಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಏ. 17 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಮ್.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡ ರಸ್ತೆಯಿಂದ 8ನೇ ಅಡ್ಡರಸ್ತೆವರೆಗೆ, ಗ್ಲಾಸ್ಹೌಸ್ ರಸ್ತೆ, ಬಿ.ಐ.ಇ.ಟಿ. ಕಾಲೇಜು, ಬಾಪೂಜಿ ಬ್ಯಾಂಕ್ ಸಮುದಾಯ ಭವನ, ಬಾಟ್ಲಿ ಬಿಲ್ಡಿಂಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿರಸ್ತೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



