ದಾವಣಗೆರೆ: ನಗರದ ಉಪವಿಭಾಗ-2 ರ ವ್ಯಾಪ್ತಿಯ 66/11 ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್8-ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಇಂದು (ಸೆ.23) ಸ್ಮಾರ್ಟ್ಸಿಟಿ ಯೋಜನೆಯ ಕಾಮಗಾರಿ ನಿರ್ವಹಿಸಬೇಕಿದ್ದು, ವಿದ್ಯುತ್ ವ್ಯತ್ಯವಾಗಲಿದೆ. ದೇವರಾಜ ಅರಸ್ ಬಡಾವಣೆ ಬಿ ಬ್ಲಾಕ್ ಮತ್ತು ಸಿ ಬ್ಲಾಕ್, ಎಸ್ಪಿ ಆಫೀಸ್, ಆರ್ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್ಪಿಎಸ್ ನಗರ 2ನೇ ಹಂತ, ಎಸ್ಎಮ್ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



