Connect with us

Dvgsuddi Kannada | online news portal | Kannada news online

ನಾಳೆ ದಾವಣಗೆರೆ ನಗರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ನಾಳೆ ದಾವಣಗೆರೆ ನಗರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆಯಿಂದ ಹೊರಡುವ ಎಸ್.ವಿ.ಟಿ ಮೌನೇಶ್ವರ, ಜಯನಗರ, ಮತ್ತು ಇ.ಎಸ್.ಐ ಫೀಡರ್‍ಗಳಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.19 ರಂದು ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಸ್.ವಿ.ಟಿ ಫೀಡರ್‍ನ ವ್ಯಾಪ್ತಿಯ ಮಾಮಾಸ್ ಜಾಯಿಂಟ್ ರಸ್ತೆ, ಎಮ್.ಸಿ.ಸಿ.ಬಿ ಬ್ಲಾಕ್, ಡೆಂಟಲ್ ಕಾಲೇಜ್ ರಸ್ತೆ, ಆಂಜನೇಯ ಬಡಾವಣೆ 1ನೇ ಕ್ರಾಸ್ ನಿಂದ 4ನೇ ಕ್ರಾಸ್ ವರೆಗೆ,ಯು.ಬಿ.ಡಿ.ಟಿ. ಕಾಲೇಜ್, ಡಿ.ಆರ್.ಆರ್. ಪಾಲಿಟೆಕ್ನಿಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಮೌನೇಶ್ವರ ಫೀಡರ್‍ನ ವ್ಯಾಪ್ತಿಯ ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಜಯನಗರ ಫೀಡರ್‍ನ ವ್ಯಾಪ್ತಿಯ ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳು. ಇ.ಎಸ್.ಐ ಫೀಡರ್‍ನ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top