ದಾವಣಗೆರೆ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ವಿದ್ಯುತ್ ಉತ್ಪಾದನೆ ತೀವ್ರ ಕುಸಿತ ಕಂಡಿದೆ. ಜಿಲ್ಲೆಯ16 ಮೇನ್ ಸ್ಟೇಷನ್ ಗಳಿಗೆಯೇ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಜಿಲ್ಲೆಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು, ಗ್ರಾಹಕರು ಹೈರಾಣ ಆಗಿದ್ದಾರೆ.
ದಾವಣಗೆರೆಗೆ ವಿದ್ಯುತ್ ಪೂರೈಸುವ 220 ಕೆ.ವಿ. ಸ್ಟೇಷನ್ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ದಾವಣಗೆರೆಯ ವ್ಯಾಪ್ತಿಯ 16 ಸ್ಟೇಷನ್ಗಳ ವ್ಯಾಪ್ತಿಯಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗುತ್ತಿದೆ. ಇದರಿಂದ ರೈತರ ಜಮೀನಿನ ಮೋಟರ್ ಲೈನ್ ಗಳಿಗೆ 7 ತಾಸಿನಲ್ಲಿ ಸರಿಯಾಗಿ 4 ತಾಸು ಸಹ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದ ರೈತರ ಕಂಗಾಲಾಗಿದ್ದಾರೆ.
ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ 220 ಕೆವಿ ಸ್ಟೇಷನ್ನಲ್ಲಿ ವಿದ್ಯುತ್ ಕಡಿಮೆಯಾಗಿದೆ. ಈ ಬಗ್ಗೆ ಯಾವುದೇ ಮಾಹಿತಿಯೂ ಇಲ್ಲ. ಹೀಗಾಗಿವವಿದ್ಯುತ್ ಲೋಡ್ ಶೆಡ್ಡಿಂಗ್ಗೆ ಸಮಯ ನಿಗದಿ ಮಾಡಲು ಆಗಿಲ್ಲ. ಉತ್ಪಾದನೆಗಿಂತ ಬಳಕೆ ಜಾಸ್ತಿಯಾದರೆ ವಿದ್ಯುತ್ ಸಮಸ್ಯೆಯಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂಗಾರು ಮಳೆ ಅಗತ್ಯಕ್ಕೆ ತಕ್ಕಷ್ಟು ಬಾರದೆ ಇರುವುದರಿಂದ ಜಲಾಶಯಗಳು ತುಂಬಿಲ್ಲ. ಅಲ್ಲದೇ ಕಲ್ಲಿದ್ದಲ ಸಮಸ್ಯೆಯಿಂದಾಗಿಯೂ ಕೊರತೆಯಾಗಿದೆ. ಜಲವಿದ್ಯುತ್, ಥರ್ಮಲ್ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ. ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ಗಾಳಿಯೂ ಕಡಿಮೆ ಇರುವುದರಿಂದ ಪವನ ವಿದ್ಯುತ್ ಸಹ ಹೆಚ್ಚಾಗಿ ಉತ್ಪಾದನೆಯಾಗುತ್ತಿಲ್ಲ. ವಿದ್ಯುತ್ ಉತ್ಪಾದನೆ ಕಡಿಮೆಯಾಗಿರುವುದರಿಂದ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಕಡೆ ಸಮಸ್ಯೆಯಾಗಿದೆ. ರೈತರರು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿ ಹರಿಹರ ಶಾಸಕ ಬಿ.ಪಿ. ಹರೀಶ್ ನೇತೃತ್ವದಲ್ಲಿ ಬೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟಿಸಿದರು.



