ದಾವಣಗೆರೆ: ಜಲಸಿರಿ ಯೋಜನೆಯಡಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪಗೋಡೌನ್, ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಜಿ ಅಂಡ್ ಎಸ್ ಎಫ್7 ಫೀಡರ್ ವ್ಯಾಪ್ತಿಯ ಪಿ.ಬಿ. ರಸ್ತೆ.ಬಿಲಾಲ್ ಕಾಂಪೊಂಡ್, ಸಂಚಾರಿ ಪೋಲಿಸ್ ಠಾಣೆ, ತಾಲ್ಲೂಕು ಕಚೇರಿ, ಅಗ್ನಿಶಾಮಕ ಠಾಣೆ, ಎಪಿಎಂಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್ಸಿಂಗ್ ನಗರ, ಗಣೇಶ ಲೇಔಟ್, ಗೀತಾಂಜಲಿ ಟಾಕೀಸ್, ಈರುಳ್ಳಿ ಮಾರ್ಕೇಟ್, ಕೆಎಸ್ಆರ್ಟಿಸಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



