ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಿಂದ ಸರಬರಾಜು ಮಾರ್ಗದ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಅ.27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆನಗೋಡು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಹೆಬ್ಬಾಳು, ಆರಾಧ್ಯ ಕೈಗಾರಿಕೆ, ನಿರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಗಿ, ಕೊಗ್ಗನೂರು, ಚಿನ್ನಸಮುದ್ರ, ಆನಗೋಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಅತ್ತಿಗೆರೆ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ತೋಳಹುಣಸೆ, ಕುರ್ಕಿ, ಕಬ್ಬೂರು, ಗೋಪನಾಳ್, ಕಂದಗಲ್ಲು, ಬಾಡ ಅತ್ತಿಗೆರೆ, ಅತ್ತಿಗೆರೆ, ಹನುಮನಹಳ್ಳಿ, ಹಿರೇತೊಗಲೇರಿ, ರಾಮಗೊಂಡನಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಮಾಯಕೊಂಡ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ಬಿ.ದುರ್ಗ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬುಳ್ಳಾಪುರ, ಕೊಡಗನೂರು, ಹೆಚ್.ಬಸಾಪುರ, ಬಾಡ ಮಾಯಕೊಂಡ, ನಲ್ಕುಂದ, ಬೊಮ್ಮೆನಹಳ್ಳಿ, ಬಾವಿಹಾಳು, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



