ದಾವಣಗೆರೆ: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ಧ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 14 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ. ಕಾಲೇಜು, ದೇವರಾಜ ಅರಸ್ ಬಡಾವಣೆ, ಪೂಜಾ ಹೋಟೆಲ್, ಸಾಯಿ ಹೋಟೆಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿ.ಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ವಾಣಿಜ್ಯ ತೆರಿಗೆ ಕಚೇರಿ, ದೂಡಾ ಕಚೇರಿ, ಬಿ.ಎಸ್.ಎನ್.ಎಲ್ ಕಚೇರಿ, ವಿನಾಯಕ ನಗರ, ಶಂಕರ್ ವಿಹಾರ್ ಬಡಾವಣೆ, ಮೋತಿ ಬೇಕರಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



