ದಾವಣಗೆರೆ: ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿಜಯನಗರ, ಎಸ್ಜೆಎಂ ಮಾರ್ಗಗಳ ವ್ಯಾಪ್ತಿಯಲ್ಲಿ ಜಲಸಿರಿ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆ ಹಾಗೂ ಸ್ಮಾರ್ಟ್ಸಿಟಿ ಕಾಮಗಾರಿ ನಿರ್ವಹಿಸಬೇಕಿದ್ದು, ನ.17 ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್08-ವಿಜಯನಗರ ಫೀಡರ್: ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್ಪಿ ಆಫೀಸ್, ಆರ್ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್ಪಿಎಸ್ ನಗರ 2ನೇ ಹಂತ, ಎಸ್ಎಮ್ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್16-ಎಸ್ಜೆಎಮ್ ಫೀಡರ್: ಕೊಂಡಜ್ಜಿ ರಸ್ತೆ, ಎಸ್ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್ಎಮ್ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



