ದಾವಣಗೆರೆ: ಬೆವಿಕಂ ವತಿಯಿಂದ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 17 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
66/11ಕೆವಿ ಪಲ್ಲಾಗಟ್ಟೆ, ಜಗಳೂರು ಮತ್ತು ಹೆಚ್.ಎಂ ಹೊಳೆ ವಿ.ವಿ ಕೇಂದ್ರಗಳಿಗೆ ಸಂಬಂಧಿಸಿದ ಎನ್ಜೆವೈ & ಐ.ಪಿ 11ಕೆವಿ ಮಾರ್ಗಗಳಲ್ಲಿ ಜಂಗಲ್ ಕಟಿಂಗ್ ಮತ್ತು ಪೀಡರ್ಗಳ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.17 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ರಂಗಾಪುರ, ತುಪ್ಪದಹಳ್ಳಿ, ಬಸವನಕೋಟೆ, ಗಿಡ್ಡನಕಟ್ಟೆ, ಸಿದ್ದಿಹಳ್ಳಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


