ದಾವಣಗೆರೆ: ದಾವಣಗೆರೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ವಿದ್ಯುತ್ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎಫ್-21 ತರಳುಬಾಳು ಫೀಡರ್ ಗ್ರಾಮಗಳಾದ ಶಿರಮಗೊಂಡನಹಳ್ಳಿ, ನಾಗನೂರು, ಹೊಸ ಬಿಸಿಲೇರಿ, ಹಳೇ ಬಿಸಿಲೇರಿ, 6ನೇ ಕಲ್ಲು, 7 ನೇ ಕಲ್ಲು ಮತ್ತು ಬನಶಂಕರಿ ಬಡಾವಣೆ 2 ನೇ ಹಂತ, ಜೆಎಚ್ಪಿ-01 ಫೀಡರ್ ಗ್ರಾಮಗಳಾದ, ಹೊಸ ಕುಂದವಾಡ, ಹಳೇಕುಂದವಾಡ, ಕೆಎಚ್ಬಿ ಕಾಲೋನಿ, ರಶ್ಮಿ ಸ್ಕೂಲ್ ಸುತ್ತ ಮುತ್ತ, ಮತ್ತು ಕುಕ್ಕುವಾಡ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗಗಳಿಗೆ ಇಂದು ಜ.06 ರಂದು ಬೆಳಗ್ಗೆ 10 ಗಂಟೆಯಿಂದ 06.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಜಗಳೂರು ಉಪವಿಭಾಗ ವ್ಯಾಪ್ತಿಯ 66/11 ಕೆವಿ ಬಿದರಕೆರೆ ವಿದ್ಯುತ್ ಮಾರ್ಗದ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿದ್ದು, ಕಾಮಗಾರಿಗೆ ಸಂಬಂಧಿಸಿದಂತೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳು ಮತ್ತು ನೀರಾವರಿ ಪಂಪ್ಸೆಟ್ಟು ಮಾರ್ಗಗಳಿಗೆ ಜ.06 ರಂದು ಬೆಳಗ್ಗೆ 10 ರಿಂದ ಸಂಜೆ 05 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



