ದಾವಣಗೆರೆ: ದಾವಣಗೆರೆ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಮ್.ಸಿ.ಸಿ.ಬಿ, ಫೀಡರ್ನಲ್ಲಿ ಸ್ಮಾರ್ಟ್ ಸಿಟಿ ಲಿಮಿಟೆಡ್ಗೆ ಸಂಬಂಧಿಸಿದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ. ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಎಸಿಬಿ ಕಛೇರಿ ರಸ್ತೆ, ಅಂಗವಿಕ¯ ಸ್ಕೂಲ್, ಕರ್ನಾಟಕ ಬ್ಯಾಂಕ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



