ದಾವಣಗೆರೆ; ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ‌ ವೇಳೆ ಅನ್ಯ ಕೋಮಿನಿಂದ ಅಡ್ಡಿ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ‌ ವೇಳೆ ಅಡ್ಡಿಪಡಿಸಿದವರ ವಿರುದ್ಧ ಕಠಿಣ ಕ್ರಮ ಆಗ್ರಹಿಸಿ ಹಿಂದೂ ಸಂಘಟನೆ ಹಾಗೂ ಮಹಾರಾಜರ ಯುವಕರ ಸಂಘ‌ ಬಡಾವಣೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ನಗರದ ಬಸವರಾಜಪೇಟೆಯಲ್ಲಿ‌ ನಿನ್ನೆ (ಅ.13) ರಾತ್ರಿ ಗಣೇಶೋತ್ಸವ ಮೆರವಣಿಗೆಗೆ ಅನ್ಯ ಕೋಮಿನವರು ಅಡ್ಡಿಪಡಿಸಿದ್ದಾರೆ. ನಮ್ಮ ಏರಿಯಾದಲ್ಲಿ ಡಿ.ಜೆ. ಹಾಕುವಂತಿಲ್ಲ ಎಂದು ಮೆರವಣಿಗೆ ಬಂದ್ ಮಾಡಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಜಯದೇವ ವೃತ್ತದಿಂದ ಬಡಾವಣೆ ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು. ಮಹಾರಾಜರ ಯುವಕರ‌ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಮೆರವಣಿಗೆಯಲ್ಲಿದ್ದ ಯುವಕರ ಮೇಲೆ ಥಳಿಸಿ, ಡಿಜೆ ಕಿತ್ತು ಹಾಕಿದ ಪೊಲೀಸ್ ಅಧಿಕಾರಿ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದರು.

ಎಸ್ಪಿ ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಬೇಕೆಂದು ಪಟ್ಟುಹಿಡಿದರು. ಸ್ವಲ್ಪ‌ ಸಮಯದ ನಂತರ ಪ್ರತಿಭಟನೆ ಸ್ಥಳಕ್ಕೆ ಬಂದ ಎಸ್ಪಿ ಉಮಾ ಪ್ರಶಾಂತ್, ಮನವಿ ಪತ್ರವನ್ನು ಪರಿಶೀಲಿಸಿ ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *