ದಾವಣಗೆರೆ: ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ; ಕೇಂದ್ರದ ಸುತ್ತ ನಿಷೇಧಾಜ್ಞೆ ಜಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯಲ್ಲಿ ನಾಳೆ (ಮಾ. 9) 29ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರ ಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿವಾನಂದ ಕಪಾಶಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ವ್ಯಾಪ್ತಿಯ 31 ಪರೀಕ್ಷಾ ಕೇಂದ್ರಗಳಲ್ಲಿ
ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಹಿನ್ನಲೆಯಲ್ಲಿ ಪರೀಕ್ಷಾ ದಿನಗಳಂದು ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ
ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿರುವ ಜೆರಾಕ್ಸ್‌ ಅಂಗಡಿಗಳು, ಸೈಬರ್‌ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಲು ಆದೇಶ
ಹೊರಡಿಸಿದ್ದಾರೆ.

ಆದೇಶವು ಪರೀಕ್ಷಾರ್ಥಿಗಳಿಗೆ ಹಾಗೂ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅನ್ವಯಿಸುವುದಿಲ್ಲ, ಪರೀಕ್ಷಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಬರುವ ಪೋಷಕರು ಯಾವುದೇ ಕಾರಣಕ್ಕೂ ಪರೀಕ್ಷಾ‌ ಕೇಂದ್ರದ ಬಳಿ ಗುಂಪುಗೂಡುವುದು, ನಿಲ್ಲುವುದು ಮತ್ತು ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ಸಂಪೂರ್ಣ ವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *