Connect with us

Dvgsuddi Kannada | online news portal | Kannada news online

ಮೂರು ವರ್ಷದ ಮಗು ಅಪಹರಿಸಿಕೊಂಡು ರೈಲಿನಲ್ಲಿ ಬರುತ್ತಿದ್ದ ಯುವಕ; ದಾವಣಗೆರೆ ರೈಲ್ವೆ ಪೊಲೀಸರ ವಶ

ದಾವಣಗೆರೆ

ಮೂರು ವರ್ಷದ ಮಗು ಅಪಹರಿಸಿಕೊಂಡು ರೈಲಿನಲ್ಲಿ ಬರುತ್ತಿದ್ದ ಯುವಕ; ದಾವಣಗೆರೆ ರೈಲ್ವೆ ಪೊಲೀಸರ ವಶ

ದಾವಣಗೆರೆ: ಅಕ್ಕನ ಅಕ್ರಮ ಸಂಬಂಧಕ್ಕೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ರೈಲಿನಲ್ಲಿ ಬರುತ್ತಿದ್ದ ಯುವಕನನ್ನು ದಾವಣಗೆರೆ ರೈಲ್ವೆ ಪೊಲೀಸರು ವಶಕ್ಕೆ‌ ಪಡೆದಿದ್ದಾರೆ.

ತರುಣ್(17) ಬಂಧಿತ ಬಾಲಕನಾಗಿದ್ದು, ತಮ್ಮ ಅಕ್ಕನ ಮಗು ಗೋಯಲ್(3) ಅಪಹರಿಸಿಕೊಂಡು ಬರುತಗತಿದ್ದನು. ಬೆಂಗಳೂರಿನಲ್ಲಿ ಅಕ್ಕ ವ್ಯಕ್ತಿಯೊಬ್ಬನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡು ಅವನೊಂದಿಗೆ ವಾಸಿಸುತ್ತಿದ್ದಳು.ಈ ವಿಚಾರ ತಮ್ಮನಿಗೆ ಗೊತ್ತಾಗಿದೆ. ಅಕ್ರಮ ಸಂಬಂಧ ಬಿಡುವಂತೆ ಯುವಕ ತಮ್ಮ ಅಕ್ಕನಿಗೆ ಹೇಳಿದ್ದನು. ಆದರೆ ತಮ್ಮನ ಮಾತಿಗೆ ಕಿವಿಗೊಡದೆ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಮುಂದುವರಿಸಿದ್ದಳು.‌ ಇದರಿಂದ ಅಕ್ಕನ ನಡೆ ಬಗ್ಗೆ ಬೇಸತ್ತು ಆಕೆಯ ಮೂರು ವರ್ಷದ ಮಗುವನ್ನು ಅಪಹರಿಸಿಕೊಂಡು ಯುವಕ ಪರಾರಿಯಾಗಿದ್ದ.

ಆತಂಕಗೊಂಡು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದ ಮಗುವಿನ ತಾಯಿ. ತಕ್ಷಣ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು. ಮಗುವಿನೊಂದಿಗೆ ಬಾಲಕ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ಟ್ರೈನ್‌ನಲ್ಲಿ ಪ್ರಯಾಣಿಸುತ್ತಿರುವ ವಿಚಾರ ಗೊತ್ತಾಗಿದೆ. ತಕ್ಷಣ ಬೆಂಗಳೂರು ಪೊಲೀಸರು, ದಾವಣಗೆರೆ ರೈಲ್ವೆ ಆರ್‌ಪಿಎಫ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಕಾರ್ಯಾಚರಣೆಗೆ ಇಳಿದ ದಾವಣಗೆರೆ ರೈಲ್ವೆ ಇನ್ಸ್‌ಪೆಕ್ಟರ್ ಎಕೆ ರೆಡ್ಡಿ ಹಾಗೂ ಸಿಬ್ಬಂದಿ, ನಿಜಾಮುದ್ದಿನ್ ಎಕ್ಸ್‌ಪ್ರೆಸ್ ಟ್ರೈನ್ ಬರುತ್ತಿದ್ದಂತೆ ಪ್ರಯಾಣಿಕರ ತಪಾಸಣೆ ನಡೆಸಿದ್ದಾರೆ. ಟ್ರೈನ್‌ನಿಂದ ಮಗುವಿನೊಂದಿಗೆ ಕೆಳಗಿಳಿಯುತ್ತಿದ್ದಂತೆ ಯುವಕ ಮತ್ತು ಮಗುವಿನ ರಕ್ಷಣೆ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top