Connect with us

Dvgsuddi Kannada | online news portal | Kannada news online

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

IMG 20230914 163239

ದಾವಣಗೆರೆ

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಶಿಕ್ಷಕರೊಬ್ಬರು ಎಡವಿ ಹಳಿ ಮೇಲೆ ಬಿದ್ದಿದ್ದಾರೆ. ದಿಢೀರ್ ಗೂಡ್ಸ್ ರೈಲು ಬಂದಿದ್ದು, ಆಗ ಹಳಿ ಮಧ್ಯೆಯೇ ಮಲಗಿ ಉಳಿಸಿಕೊಂಡು ಸಾಹಸ ಮೆರೆದಿದ್ದಾರೆ. ಈ ದೃಶ್ಯ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರದ ರೈಲ್ವೆ ನಿಲ್ದಾಣದಲ್ಲಿ ಚಿತ್ರದುರ್ಗ ಜಿಲ್ಲೆಯ ಬಿ.ದುರ್ಗ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಿವಕುಮಾರ್ ಬೆಳಿಗ್ಗೆ 8.30ರ ವೇಳೆ ಬೆಂಗಳೂರು ಇಂಟರ್ ಸಿಟಿ ರೈಲಿಗೆ ಹೊರಡಲು ಸಿದ್ಧರಾಗಿದ್ದರು. ಆಗ, ಒಂದನೇ ಫ್ಲಾಟ್ ಫಾರಂನಿಂದ 2ನೇ ಫ್ಲಾಟ್ ಫಾರಂಗೆ ಹೋಗಲು ಹಳಿ ದಾಟುವಾಗ ಚಪ್ಪಲಿ ಸಿಲುಕಿಕೊಂಡು ಎಡವಿ ಹಳಿಯ ಮಧ್ಯೆ ಬಿದ್ದಿದ್ದಾರೆ. ದಿಢೀರ್ ಗೂಡ್ಸ್ ರೈಲು ಅದೇ ಹಳಿಯ ಮೇಲೆ ಬಂದಿದೆ. ಶಿವಕುಮಾರ್ ಹಳಿಯ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡಿದ್ದಾರೆ.

 

ಅಲ್ಲೇ ಇದ್ದ ರೈಲ್ವೆ ಸಿಬ್ಬಂದಿ ಗೂಡ್ಸ್ ರೈಲು ನಿಲ್ಲಿಸಿದ್ದು, ಆರ್ ಪಿಎಫ್ ಸಿಬ್ಬಂದಿ ಅವರನ್ನು ಮೇಲೆ ಎತ್ತಿ ರಕ್ಷಿಸಿದ್ದಾರೆ .ಶಿಕ್ಷಕ ಶಿವಕುಮಾರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗಿದೆ.

ತೀವ್ರ ಮಳೆ ಕೊರತೆ; ರಾಜ್ಯದ 195 ತಾಲ್ಲೂಕ್ ಬರಪೀಡಿತ ಎಂದು ಘೋಷಿಸಿದ ಸರ್ಕಾರ; ದಾವಣಗೆರೆ ಜಿಲ್ಲೆಯ ಆರು ತಾಲ್ಲೂಕಿನಲ್ಲಿಯೂ ಬರ..!

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಸ್ಥಿರತೆ; ಇಂದಿನ ಅಡಿಕೆ ದರ 50, 379 ರೂಪಾಯಿ..!

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top