ದಾವಣಗೆರೆ: ಜಿಲ್ಲೆಯಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇನ್ನೊಬ್ಬ ವ್ಯಕ್ತಿ ತೀವ್ರ ಗಾಯಗೊಂಡ ಘಟನೆ ನಡೆದಿದೆ. ಮಂಜುನಾಥ(48) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ.
ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಈ ಮಳೆಗೆ ಗೋಡೆ ಕುಸಿತದಿಂದ ತೀವ್ರ ಗಾಯಗೊಂಡ ಮಂಜುನಾಥ ಆಸ್ಪತ್ರೆ ಗೆ ಕರೆತರುವಷ್ಟರಲ್ಲಿ ಸಾವನ್ನಪ್ಪಿದ್ಧಾರೆ. ಈ ಬಗ್ಗೆ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.