ದಾವಣಗೆರೆ: ಮಳೆಯಿಂದ ರಕ್ಷಣೆಗಾಗಿ ಮರದಡಿ ನಿಂತಿದ್ದ ಕುರಿಗಾಹಿ ಯುವಕನಿಗೆ ಸಿಡಿಲು ಬಡಿದು ಮೃತಪಟ್ಟ ಘಟನೆ ತಾಲ್ಲೂಕಿನ ಮುದಹದಡಿ ಗ್ರಾಮದ ಸಮೀಪ ನಡೆದಿದೆ.
ಮನೆದೇವರು, ಶಾಮನೂರು ಶಿವಶಂಕರಪ್ಪ ಹೆಸರನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಮರಡಿ ಗ್ರಾಮದ ದುಂಡಪ್ಪ ಬಿ.ಗವನಾಳ ಅಜಯ್ (19) ಮೃತಪಟ್ಟ ದುರ್ದೈವಿ. ಮೃತ ದುಂಡಪ್ಪ ಅವರ ಕುಟುಂಬವು ಕುರಿಗಳನ್ನು ಮೇಯಿಸಲು ಜಿಲ್ಲೆಗೆ ವಲಸೆ ಬಂದಿತ್ತು.
ಭದ್ರಾ ಜಲಾಶಯ ನೀರು ; ಮೇ 17ರಿಂದ ಕಡಿತ
ಮುದಹದಡಿ ಗ್ರಾಮದ ಹೊರವಲಯದಲ್ಲಿ ಪ್ರತಿದಿನದಂತೆ ಅಜಯ್ ಗುರುವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ರೈತರ ಜಮೀನುಗಳಲ್ಲಿ ಕುರಿಗಳನ್ನು ಮೇಯಿಸುತ್ತಿದ್ದರು. ಬೆಳಿಗ್ಗೆಯಲ್ಲಿ ಬೀಡುಬಿಟ್ಟಿತ್ತು. ಸಂಜೆ ವೇಳೆಗೆ ಹಠಾತ್ ಗುಡುಗು ಸಹಿತ ಮಳೆ ಆರಂಭವಾಗಿದೆ.ಮಳೆಯಿಂದ ಬಚಾವಾಗಲು ಅಜಯ್ ಸಮೀಪದಲ್ಲಿದ್ದ ಮರದ ಕೆಳಗೆ ಆಶ್ರಯ ಪಡೆದಿದ್ದರು.
ವಿದ್ಯಾರ್ಥಿಗಳಿಗೆ ‘ಅರಿವು’ ಯೋಜನೆಯಡಿ ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ
ಈ ವೇಳೆ ಕ್ಷಣಾರ್ಧದಲ್ಲಿ ಬಡಿದ ಸಿಡಿಲಿನಹೊಡೆತಕ್ಕೆ ಸಿಲುಕಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹದಡಿಠಾಣೆಯ ಪೊಲೀಸರು ತಿಳಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ.
ದುಂಡೆಪ್ಪನ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ಪರಿಹಾರ ಒದಗಿಸಲು ತಹಶೀಲ್ದಾರ್ ಗೆ ಶಾಸಕ ಸಮರ್ಥ್ ಶಾಮನೂರು ಸೂಚನೆ ನೀಡಿದ್ದಾರೆ.



