ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರೆದಿದ್ದು, ಜಿಲ್ಲೆಯ ಬಹುತೇಕ ಕಡೆ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ ದಾಖಲೆಯ 30 ಮಿ.ಮೀ ಮಳೆಯಾಗಿದೆ. ನಿನ್ನೆ ಸಂಜೆಯಿಂದ ( ಮೇ.16) ತಡ ರಾತ್ರಿ ವರೆಗೆ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 24.9 ಮಿ.ಮೀ. ಸರಾಸರಿ ಮಳೆಯಾಗಿದ್ದು. 55.16 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 27.3 ಮಿ.ಮೀ, ದಾವಣಗೆರೆ 24.7, ಹರಿಹರ 30.6 ಮಿ.ಮೀ, ಹೊನ್ನಾಳಿ 28.0 ಮಿ.ಮೀ ಮಳೆಯಾಗಿದೆ. ಜಗಳೂರು 8.5 ಮಿ.ಮೀ, ನ್ಯಾಮತಿಯಲ್ಲಿ 48.8 ಮಿ.ಮೀ ಮಳೆಯಾಗಿದೆ.ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 02 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 60 ಸಾವಿರ ಮತ್ತು 205-00 ಎಕರೆ ಭತ್ತದ ಬೆಳೆ ಹಾಗೂ 20 ಗುಂಟೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ.4.40 ಲಕ್ಷ, ಒಂದು ಜಾನುವಾರು ಮೃತಪಟ್ಟಿದ್ದು ರೂ.30 ಸಾವಿರ ಸೇರಿ ಒಟ್ಟು ರೂ.5.30 ಲಕ್ಷ ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 05 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 1.10 ಲಕ್ಷ ಮತ್ತು 285-00 ಎಕರೆ ಭತ್ತದ ಬೆಳೆ ಮತ್ತು 1 ಎಕರೆ ಬಾಳೆ ಬೆಳೆ ಹಾನಿಯಾಗಿದ್ದು, ರೂ.17.61 ಲಕ್ಷ, ಒಂದು ಕುರಿ ಮೃತಪಟ್ಟಿದ್ದು ರೂ.5 ಸಾವಿರ ಸೇರಿ ಒಟ್ಟು ರೂ.18.76 ಲಕ್ಷ ನಷ್ಟ ಸಂಭವಿಸಿದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಹಾನಿಯಾಗಿದ್ದು, ಅಂದಾಜು ರೂ 5.00 ಲಕ್ಷ, 40 ಎಕರೆ ಭತ್ತದ ಬೆಳೆ ಹಾಗೂ 16 ಎಕರೆ ಭತ್ತ ಮತ್ತು ಅಡಿಕೆ ಬೆಳೆ ಹಾನಿಯಾಗಿದ್ದು, ಒಟ್ಟು ರೂ.18.20 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 50 ಸಾವಿರ ಅಂದಾಜು ನಷ್ಟ ಸಂಭವಿಸಿರುತ್ತದೆ. 1 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ. 50 ಸಾವಿರ, ಒಟ್ಟು 2.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. 6.30 ಎಕರೆ ಪಪ್ಪಾಯಿ ಬೆಳೆ, 3.00 ಎಕರೆ ಎಲೆಬಳ್ಳಿ, 2.00 ಎಕರೆ ಟೋಮಾಟೋ ಹಾನಿಯಾಗಿದ್ದು, ರೂ.50 ಸಾವಿರ ಸೇರಿ, ಒಟ್ಟು 10.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ55.16 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



