ದಾವಣಗೆರೆ: ಜಿಲ್ಲೆಯಲ್ಲಿ ಮೇ.18 ರಂದು ದಾಖಲೆಯ 48 ಮಿ.ಮೀ. ಸರಾಸರಿ ಮಳೆಯಾಗಿದ್ದು. ಅತೀವೃಷ್ಟಿಯಿಂದ 55.16 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.
ಚನ್ನಗಿರಿಯಲ್ಲಿ 40 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 63.0 ಮಿ.ಮೀ, ಹರಿಹರದಲ್ಲಿ 44.0 ಮಿ.ಮೀ, ಹೊನ್ನಾಳಿ 42.0 ಮಿ.ಮೀ, ಜಗಳೂರು 45.0 ಮಿ.ಮೀ, ನ್ಯಾಮತಿಯಲ್ಲಿ 59.0 ಮಿ.ಮೀ ಮಳೆಯಾಗಿದೆ.ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 10 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 3.30 ಲಕ್ಷ ಮತ್ತು 446-00 ಎಕರೆ ಭತ್ತದ ಬೆಳೆ ಹಾಗೂ 1.20 ಗುಂಟೆ ಅಡಿಕೆ ಬೆಳೆ, 2 ಎಕರೆ ಕೋಸು, 10 ಗುಂಟೆ ತೆಂಗು ಬೆಳೆ ಹಾನಿಯಾಗಿದ್ದು, ರೂ.6.60 ಲಕ್ಷ, ಒಟ್ಟು ರೂ.9.90 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.
ಹರಿಹರ ತಾಲ್ಲೂಕಿನ ವ್ಯಾಪ್ತಿಯಲ್ಲಿ 01 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ಅಂದಾಜು ರೂ 2.00 ಲಕ್ಷ, 02 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ 0.60 ಲಕ್ಷ, 1118-00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.72.36 ಲಕ್ಷ, ಒಟ್ಟು ರೂ.74.96 ಲಕ್ಷ ನಷ್ಟ ಸಂಭವಿಸಿದೆ.
ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.0.40 ಲಕ್ಷ ಮತ್ತು 257-29 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.77.60 ಲಕ್ಷ ಒಟ್ಟು78.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 6 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.3.00 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ, 2-27 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು, ರೂ.0.90 ಲಕ್ಷ ಒಟ್ಟು ರೂ.4.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 3.20 ಲಕ್ಷ 3 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.10 ಲಕ್ಷ 35-00 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ. 3.25 ಲಕ್ಷ ಒಟ್ಟು ರೂ.8.55 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 14 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 8.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. 183.91 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.