ದಾವಣಗೆರೆ: ಮನೆ, ಕಟ್ಟಡಗಳಿಗೆ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾಯ; ನಿಯಮ ಉಲ್ಲಂಘಿಸಿದ್ರೆ 10 ಸಾವಿರ ದಂಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರು ಕೊಯ್ಲು ಕಡ್ಡಾಯವಾಗಿದೆ. ಬಹಳಷ್ಟು ಮನೆಗಳಲ್ಲಿ ಅಳವಡಿಸಿಕೊಂಡಿರುವುದಿಲ್ಲ, ಇದು ನೀರಿನ ಅಭಾವದ ಜೊತೆಗೆ ಅಂತರ್ಜಲಮಟ್ಟ ಕುಸಿತವಾಗಲು ಕಾರಣವಾಗಿದ್ದು ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ವಿಧಾನವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ರೇಣುಕಾ ತಿಳಿಸಿದ್ದಾರೆ.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವುದು ಹಾಗೂ ಕಟ್ಟಡದ ಮಾಲೀಕರು ಕಟ್ಟಡದಲ್ಲಿ ಮಳೆ ನೀರು ಕೊಯ್ಲಿನ ವಿಧಾನವನ್ನು ಅಳವಡಿಸದೇ ಇರುವುದು ಕಂಡುಬಂದಿದ್ದು, ಅಂತಹ ಕಟ್ಟಡದ ಮಾಲೀಕರಿಗೆ ದಂಡ ವಿಧಿಸಲಾಗುವುದು.

ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೊಡ್ಡ ಮನೆಗಳಿಗೆ (40*60 ಅಡಿ ಮೇಲ್ಪಟ್ಟ ನಿವೇಶನಗಳಲ್ಲಿನ ಕಟ್ಟಡ/ಜಿ+2 ಕಟ್ಟಡ) ರೂ 10,000 ಹಾಗೂ ಚಿಕ್ಕಮನೆಗಳಿಗೆ ರೂ 5,000 ರಂತೆ ದಂಡವನ್ನು ಕಟ್ಟಡದ ಮಾಲೀಕರಿಂದ ಪಾವತಿಸಿಕೊಳ್ಳಲಾಗುತ್ತದೆ ಎಂಬ ಸೂಚನೆ ಕೊಟ್ಟಿದ್ದಾರೆ.

ನಗರ ಯೋಜನೆ ಶಾಖೆಯಿಂದ ಎಲ್.ಬಿ.ಪಿ.ಎ.ಎಸ್ ಆನ್‌ಲೈನ್ ತಂತ್ರಾಂಶದಲ್ಲಿ ಕಟ್ಟಡ ಪರವಾನಿಗೆ ಅರ್ಜಿಗಳನ್ನು ಸ್ವೀಕರಿಸಿ ವಸತಿ, ವಾಣಿಜ್ಯ ,ಕೈಗಾರಿಕೆ ಹಾಗೂ ಇತರೆ ಉದ್ದೇಶದ ಕಟ್ಟಡ ನಿರ್ಮಿಸಲು ಕಟ್ಟಡ ಪರವಾನಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *