Connect with us

Dvgsuddi Kannada | online news portal | Kannada news online

ಭಾರೀ ಮಳೆಗೆ ತತ್ತರಿಸಿದ ದಾವಣಗೆರೆ; ಜನ ಜೀವನ ಅಸ್ತವ್ಯಸ್ತ ; 137 ಲಕ್ಷ ನಷ್ಟ

ದಾವಣಗೆರೆ

ಭಾರೀ ಮಳೆಗೆ ತತ್ತರಿಸಿದ ದಾವಣಗೆರೆ; ಜನ ಜೀವನ ಅಸ್ತವ್ಯಸ್ತ ; 137 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತ ಮಳೆಯಾಗುತ್ತಿದ್ದು, ಅದರಲ್ಲಿಯೂ ನಿನ್ನೆಯಿಂದ (ನ.18) ಬಿಟ್ಟು ಬಿಡದೆ ಮಳೆಯಾಗುತ್ತಿದೆ. ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂತೆ ಸತತ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿ 13.0 ಮಿ.ಮೀ ಸರಾಸರಿ ಮಳೆಯಾಗಿದ್ದು, ಒಟ್ಟು ರೂ.137.335 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.

ಭಾರೀ ಮಳೆಗೆ ಕೊಯ್ಲಿಗೆ ಬಂದಿದ್ದ ಮೆಕ್ಕೆಜೋಳ, ಭತ್ತ ಹಾನಿಯಾಗಿದೆ. ಸತತ ಮಳೆಯಿಂದ ಭತ್ತದ ಬೆಳೆ ಸಂಪೂರ್ಣ ನೆಲಕ್ಕೆ ಬಿದ್ದಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 14.0 ಮಿ.ಮೀ, ದಾವಣಗೆರೆ 10.0 ಮಿ.ಮೀ, ಹರಿಹರ 8.0 ಮಿ.ಮೀ, ಹೊನ್ನಾಳಿ 10.0 ಮಿ.ಮೀ, ಜಗಳೂರು ತಾಲ್ಲೂಕಿನಲ್ಲಿ 17.0 ಮಿ.ಮೀ, ನ್ಯಾಮತಿ 10.0 ಮೀ.ಮಿ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 10 ಕಚ್ಚಾಮನೆ ಭಾಗಶಃ ಹಾನಿಯಾಗಿದ್ದು, ರೂ.3.50 ಲಕ್ಷ, 302 ಎಕರೆ ಭತ್ತ, 27 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು ರೂ.25.00 ಲಕ್ಷ ಸೇರಿ ಒಟ್ಟು 28.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರಹಾನಿಯಾಗಿದ್ದು, ರೂ.2.00ಲಕ್ಷ, 3ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.41.73 ಲಕ್ಷ ಸೇರಿ ಒಟ್ಟು ರೂ.46.135 ಲಕ್ಷ ನಷ್ಟದ ಅಂದಾಜು ಮಾಡಲಾಗಿದೆ.
ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.1.80 ಲಕ್ಷ ಮತ್ತು 86 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.2.50ಲಕ್ಷ ಸೇರಿ ಒಟ್ಟು 4.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 14 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.7.00ಲಕ್ಷ 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.1.00ಲಕ್ಷ 2 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.0.30ಲಕ್ಷ ಮತ್ತು 15 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.4.00ಲಕ್ಷ, 1 ಮೇಕೆ ಮೃತಪಟ್ಟಿದ್ದು, ರೂ.0.10 ಲಕ್ಷ ರೂ.12.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.4 ಲಕ್ಷ, 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.00 ಲಕ್ಷ ಮತ್ತು 3 ಕಚ್ಚಾ ಮನೆ ತೀವ್ರಹಾನಿಯಾಗಿದ್ದು ರೂ.4.00 ಲಕ್ಷ, ಹಾಗೂ 4 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.2.00 ಲಕ್ಷ 86.20 ಎಕರೆ ಭತ್ತ ಮತ್ತು 4 ಎಕರೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ.25.00ಲಕ್ಷ ಒಟ್ಟು 36.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 4 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು ರೂ.10.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ.137.335 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top