Connect with us

Dvgsuddi Kannada | online news portal | Kannada news online

ದಾವಣಗೆರೆ: ತಡ ರಾತ್ರಿ ಸುರಿದ ಭಾರೀ ಮಳೆಗೆ ತೆಂಗು, ಅಡಿಕೆ, ಭತ್ತದ ಬೆಳೆ ಹಾನಿ

IMG 20220422 131423

ಚನ್ನಗಿರಿ

ದಾವಣಗೆರೆ: ತಡ ರಾತ್ರಿ ಸುರಿದ ಭಾರೀ ಮಳೆಗೆ ತೆಂಗು, ಅಡಿಕೆ, ಭತ್ತದ ಬೆಳೆ ಹಾನಿ

ದಾವಣಗೆರೆ: ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಅಡಿಕೆ, ತೆಂಗು ಮರಗಳು ನೆಲ ಕಚ್ಚಿವೆ. ಹತ್ತಾರು ಎಕರೆ ಅಡಿಕೆ, ತೆಂಗಿನ ತೋಟ, ಭತ್ತದ ಬೆಳೆಯಲ್ಲಿ ನೀರು ನಿಂತು ಹಾನಿಯಾಗಿದೆ.

ಜಿಲ್ಲೆಯ ಚನ್ನಗಿರಿ ತಾಲೂಕಿನ ಗಿರಿಯಾಪುರ , ಹರನಗಳ್ಳಿ, ಕೆಂಗಾಪುರ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಮಳೆ ಗಾಳಿ ಅಬ್ಬರ ಜೋರಾಗಿದೆ. ಜಿಎಸ್ ಶಿವಮೂರ್ತಪ್ಪ ಹಾಗೂ ಜಿಎಸ್ ಅಜ್ಜಪ್ಪ ಅವರಿಗೆ ಸೇರಿದ ತೋಟದಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಮರಗಳು ನೆಲ ಕಚ್ಚಿವೆ. ಸ್ಥಳಕ್ಕೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಭೇಟಿ ನೀಡುವಂತೆ ರೈತರು ಆಗ್ರಹಿಸಿದ್ದು ಸೂಕ್ತ ಪರಿಹಾರ ನೀಡಲು ಮನವಿ ಮಾಡಿದ್ದಾರೆ.

ಚನ್ನಗಿರಿ ತಾಲೂಕಿನ ಕೆಂಗಾಪುರ ಬಳಿಯ ಹಳ್ಳಕ್ಕೆ ಭಾರಿ ಪ್ರಮಾಣದ ನೀರು ಹರಿದಿದೆ. ಹರನಗಳ್ಳಿ-ಕೆಂಗಾಪುರ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಳ್ಳಕ್ಕೊಂದು ಸೇತುವೆ ನಿರ್ಮಿಸುವಂತೆ ಹತ್ತಾರು ಸಲ ಗ್ರಾಮಸ್ಥರು ಹೋರಾಟ ಮಾಡಿದರೂ ಸ್ಥಳೀಯ ಶಾಸಕ ಪ್ರೊ. ಲಿಂಗಣ್ಣ ಹಾಗೂ ತಹಶೀಲ್ದಾರ್ ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top