ದಾವಣಗೆರೆ: ಜಿಲ್ಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಸತತ ಮಳೆಯಾಗುತ್ತಿದ್ದು, ಮೇ.05 ರಂದು 15.79 ಮಿ.ಮೀ. ಸರಾಸರಿ ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ 9.49 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ 7.6 ಮಿ.ಮೀ, ದಾವಣಗೆರೆ ತಾಲ್ಲೂಕಿನಲ್ಲಿ 7.1 ಮೀ.ಮಿ, ಹರಿಹರದಲ್ಲಿ 7.05 ಮಿ.ಮೀ, ಹೊನ್ನಾಳಿ 9.6 ಮಿ.ಮೀ ಮಳೆಯಾಗಿದೆ. ಜಗಳೂರು 33.62 ಮಿ.ಮೀ, ನ್ಯಾಮತಿಯಲ್ಲಿ 29.8 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಭಾಗಶಃ ಹಾನಿಯಾಗಿದ್ದು, ರೂ.0.60 ಲಕ್ಷ ಮತ್ತು 5 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು, ರೂ.0.89 ಲಕ್ಷ.ಅಂದಾಜು ನಷ್ಟ ಸಂಭವಿಸಿರುತ್ತದೆ.ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ. 2 ಲಕ್ಷ ಮತ್ತು ಅಂದಾಜು ನಷ್ಟ ಸಂಭವಿಸುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶಃ ಹಾನಿಯಾಗಿದ್ದು, ರೂ.1 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾ ಮನೆ ಹಾನಿಯಾಗಿದ್ದು, ರೂ.3.00 ಲಕ್ಷ ಮತ್ತು 4.34 ಎಕರೆ ಬಾಳೆಬೆಳೆ 1 ಎಕರೆ ಟಮೋಟೋ ಬೆಳೆ, 0.20 ಎಕರೆ ಅವರೆ ಬೆಳೆ ಹಾಗೂ 12 ಅಡಿಕೆ ಮರ ನೆಲಕ್ಕುರುಳಿ ಹಾನಿಯಾಗಿದ್ದು, ರೂ.2 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟು ರೂ.9.49 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

 
		 
		 
		 
		 
		 
			
 
                                
                             
