ದಾವಣಗೆರೆ: ಜಿಲ್ಲೆಯಲ್ಲಿ ಇಂದು ಮಳೆ ಸ್ವಲ್ಪ ಬಿಡುವು ನೀಡಿದೆ. ನಿನ್ನೆ (ಜು.07) ಜಿಲ್ಲೆಯಲ್ಲಿ 6.3 ಮಿ.ಮೀ. ಸರಾಸರಿ ಮಳೆಯಾಗಿದ್ದು, 13.25 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.
ಚನ್ನಗಿರಿ7.4 ಮಿ.ಮೀ, ದಾವಣಗೆರೆ 4.6 ಮಿ.ಮೀ, ಹರಿಹ 5.6 ಮಿ.ಮೀ, ಹೊನ್ನಾಳಿ 13.1 ಮಿ.ಮೀ, ಜಗಳೂರು 1.8 ಮಿ.ಮೀ, ನ್ಯಾಮತಿ 11.1 ಮಿ.ಮೀ ಮಳೆಯಾಗಿದೆ.ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 5 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 3.00 ಲಕ್ಷ, 8 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 4.00 ಲಕ್ಷ ಮತ್ತು 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ. 0.10 ಲಕ್ಷ ಒಟ್ಟು ರೂ. 7.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.35 ಲಕ್ಷಮತ್ತು 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ ಒಟ್ಟು ರೂ. 1.65 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.10 ಲಕ್ಷ ಮತ್ತು 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.20 ಲಕ್ಷ ಮತ್ತು 1 ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ. 0.10 ಲಕ್ಷಒಟ್ಟು 2.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಜಿಲ್ಲೆಯಲ್ಲಿ ಒಟ್ಟಾರೆ ರೂ. 13.25 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



